ರಾಹುಲ್ ಗಾಂಧಿ-ಆಚಾರ್ಯ ಪ್ರಮೋದ್ ಕೃಷ್ಣಂ 
ದೇಶ

ರಾಹುಲ್ ನಿಂದ 15 ವರ್ಷದಲ್ಲಿ ಕಾಂಗ್ರೆಸ್ ನಿರ್ನಾಮವಾದಂತೆ 15 ತಿಂಗಳಲ್ಲಿ ವಿಪಕ್ಷಗಳು ನಿರ್ನಾಮ: ಆಚಾರ್ಯ ಪ್ರಮೋದ್‌

ಗಾಂಧಿ ಕುಟುಂಬದಲ್ಲಿ ಸದಸ್ಯರೊಬ್ಬರು ವಿರೋಧ ಪಕ್ಷದ ನಾಯಕರಾಗಿ ಸ್ಥಾನ ಪಡೆಯುತ್ತಿರುವುದು ಇದು ಮೂರನೇ ಬಾರಿಯಾಗಿದ್ದು, ಈ ಮೊದಲು ಅವರ ತಾಯಿ ಸೋನಿಯಾ ಗಾಂಧಿ ಮತ್ತು ತಂದೆ ರಾಜೀವ್ ಗಾಂಧಿ ಕೂಡ ವಿರೋಧ ಪಕ್ಷದ ನಾಯಕರಾಗಿದ್ದರು.

ಕಾಂಗ್ರೆಸ್‌ನ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಮತ್ತೊಮ್ಮೆ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯನ್ನು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರನ್ನಾಗಿ ಮಾಡಿದ್ದನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಇಡೀ ವಿರೋಧ ಪಕ್ಷವನ್ನು ನಿರ್ನಾಮ ಮಾಡಲು ರಾಹುಲ್ ಗಾಂಧಿ 15 ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

'ಕಾಂಗ್ರೆಸ್ ಅನ್ನು ನಾಶಮಾಡಲು ರಾಹುಲ್ ಜಿಗೆ 15 ವರ್ಷಗಳು ಬೇಕಾಯಿತು. ವಿರೋಧ ಪಕ್ಷವನ್ನು ನಿರ್ನಾಮ ಮಾಡಲು 15 ತಿಂಗಳು ಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ರಾಹುಲ್ ಗಾಂಧಿ ನಾಯಕತ್ವವನ್ನು ಮೆಚ್ಚಿಕೊಂಡಿರುವ ಇಡೀ ವಿರೋಧ ಪಕ್ಷಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಬಗ್ಗೆ ಯಾವುದೇ ಜ್ಞಾನವಿಲ್ಲ. ಅಂತಹ ವ್ಯಕ್ತಿಯನ್ನು ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ. ಕಾಂಗ್ರೆಸ್ಸಿನ ದುಸ್ಥಿತಿ ಪ್ರತಿಪಕ್ಷಗಳಿಗೂ ಆಗುವುದು ಖಚಿತ ಎಂದು ನಾನು ಭಾವಿಸುತ್ತೇನೆ. ಭಾರತದ ಸಂಸತ್ತು ಕಬಡ್ಡಿ ಮೈದಾನವಲ್ಲ. ಭಾರತದ ಸಂಸತ್ತು ಚರ್ಚೆಯ ಸ್ಥಳವಾಗಿದೆ. ಭಾರತದ ಭವಿಷ್ಯದ ಬಗ್ಗೆ ಚಿಂತಿಸುವ ಸ್ಥಳವಾಗಿದೆ ಎಂದರು.

ವಾಸ್ತವವಾಗಿ, ನಿನ್ನೆ ಸಂಜೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಿತು. ಇದರಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನಂತರ ಈ ಮಾಹಿತಿಯನ್ನು ಹಂಗಾಮಿ ಸ್ಪೀಕರ್ ಭರ್ತ್ರಿಹರಿ ಮಹತಾಬ್ ಅವರಿಗೂ ನೀಡಲಾಯಿತು. ಗಾಂಧಿ ಕುಟುಂಬದಲ್ಲಿ ಸದಸ್ಯರೊಬ್ಬರು ವಿರೋಧ ಪಕ್ಷದ ನಾಯಕರಾಗಿ ಸ್ಥಾನ ಪಡೆಯುತ್ತಿರುವುದು ಇದು ಮೂರನೇ ಬಾರಿಯಾಗಿದ್ದು, ಈ ಮೊದಲು ಅವರ ತಾಯಿ ಸೋನಿಯಾ ಗಾಂಧಿ ಮತ್ತು ತಂದೆ ರಾಜೀವ್ ಗಾಂಧಿ ಕೂಡ ವಿರೋಧ ಪಕ್ಷದ ನಾಯಕರಾಗಿದ್ದರು.

ಪ್ರತಿಪಕ್ಷದ ನಾಯಕರಾದ ಬಳಿಕ ರಾಹುಲ್ ಗಾಂಧಿಗೆ ಸಂಪುಟ ಸಚಿವರ ಅಧಿಕಾರ ದೊರೆಯಲಿದೆ. ಇದಲ್ಲದೇ ಸರ್ಕಾರದ ಹಲವು ಪ್ರಮುಖ ಸಮಿತಿಗಳ ಸದಸ್ಯರೂ ಆಗಲಿದ್ದಾರೆ. ಈ ಪೈಕಿ ಸಿಬಿಐ ನಿರ್ದೇಶಕರು, ಕೇಂದ್ರ ವಿಚಕ್ಷಣಾ ಆಯುಕ್ತರು, ಮುಖ್ಯ ಮಾಹಿತಿ ಆಯುಕ್ತರು ಹಲವು ಪ್ರಮುಖ ಸಮಿತಿಗಳ ಭಾಗವಾಗಲಿದ್ದಾರೆ. ಪ್ರತಿಪಕ್ಷದ ನಾಯಕರಾಗಿ, ಅವರು ಪ್ರಧಾನ ಮಂತ್ರಿ ನರೇಂದ್ರ ಅವರೊಂದಿಗೆ ಒಂದೇ ಟೇಬಲ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ. ಹಲವು ಮಹತ್ವದ ನಿರ್ಧಾರಗಳಿಗೆ ಪ್ರಧಾನಿಯವರು ವಿರೋಧ ಪಕ್ಷದ ನಾಯಕರ ಒಪ್ಪಿಗೆ ಪಡೆಯಬೇಕಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿಯ 'ವೋಟ್ ಚೋರಿ' ಆರೋಪ ಖಂಡಿಸಿ 272 ಗಣ್ಯರಿಂದ ಬಹಿರಂಗ ಪತ್ರ; ಚುನಾವಣಾ ಆಯೋಗದ ಪರವಾಗಿ ವಾದ!

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!

ನೇಪಾಳದ Gen Zಗಳು ಭಾರತಕ್ಕೂ ಬೇಕೆಂಬ ಆಸೆಯಲ್ಲಿದ್ದವರಿಗೆ ಬಿಹಾರದಲ್ಲಿ ಸಿಕ್ಕಿದ್ದು ಮೈಥಿಲಿ! (ತೆರೆದ ಕಿಟಕಿ)

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!

ಭಾರತೀಯ ಮೂಲದ ಮಮ್ದಾನಿ "ಭಾರತೀಯರನ್ನು ದ್ವೇಷಿಸುತ್ತಾರೆ: ಹೊಸ ಬಾಂಬ್ ಸಿಡಿಸಿದ ಡೊನಾಲ್ಡ್ ಟ್ರಂಪ್ ಪುತ್ರ!

SCROLL FOR NEXT