ರಾಹುಲ್ ಗಾಂಧಿ online desk
ದೇಶ

ಮಾನನಷ್ಟ ಮೊಕದ್ದಮೆ: ಜುಲೈ 2 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಯುಪಿ ಕೋರ್ಟ್ ಸೂಚನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಜು.2 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಸುಲ್ತಾನ್ ಪುರದಲ್ಲಿರುವ ಎಂಪಿ-ಎಂಎಲ್ಎ ಕೋರ್ಟ್ ಆದೇಶಿಸಿದೆ.

ಉತ್ತರ ಪ್ರದೇಶ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಜು.2 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಸುಲ್ತಾನ್ ಪುರದಲ್ಲಿರುವ ಎಂಪಿ-ಎಂಎಲ್ಎ ಕೋರ್ಟ್ ಆದೇಶಿಸಿದೆ.

ದೂರು ನೀಡಿದ ವ್ಯಕ್ತಿಯ ಪರ ವಾದ ಮಂಡಿಸಿದ ವಕೀಲ ಸಂತೋಷ್ ಕುಮಾರ್ ಪಾಂಡೆ, ರಾಮ್ ಪ್ರತಾಪ್ ಎಂಬಾತ ಈ ಪ್ರಕರಣದಲ್ಲಿ ತನ್ನನ್ನು ಕಕ್ಷಿದಾರನನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾನೆ ಎಂದು ಹೇಳಿದರು.

ಮನವಿಯನ್ನು ವಿರೋಧಿಸಿದ ಪಾಂಡೆ, ಪ್ರತಾಪ್ ಸಂತ್ರಸ್ತನೂ ಅಲ್ಲ ಅಥವಾ ಈ ವಿಷಯಕ್ಕೂ ಯಾವುದೇ ಸಂಬಂಧಪಟ್ಟಿಲ್ಲ ಎಂದು ಹೇಳಿದರು. ನ್ಯಾಯಾಲಯದಲ್ಲಿ ಹಾಜರಿದ್ದ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಕೂಡ ಅರ್ಜಿದಾರರ ಮನವಿಯನ್ನು ವಿರೋಧಿಸಿದರು.

ಆದಾಗ್ಯೂ, ನ್ಯಾಯಾಲಯ ರಾಮ್ ಪ್ರತಾಪ್ ಎಂಬಾತನ ಪ್ರಾರ್ಥನೆಯನ್ನು ವಜಾಗೊಳಿಸಿತು ಮತ್ತು ಮುಂದಿನ ವಿಚಾರಣೆಯ ದಿನಾಂಕದಂದು ಗಾಂಧಿ ಖುದ್ದು ಹಾಜರಾಗುವಂತೆ ಕರೆ ನೀಡಿತು. 2018ರಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಗಾಂಧಿ ವಿರುದ್ಧ ಮಾನನಷ್ಟ ದೂರು ದಾಖಲಿಸಿದ್ದರು. ಈ ವರ್ಷ ಫೆಬ್ರವರಿ 20 ರಂದು ಅಮೇಥಿಯಲ್ಲಿ ಗಾಂಧಿ ತಮ್ಮ "ಭಾರತ್ ಜೋಡೋ ನ್ಯಾಯ್ ಯಾತ್ರೆ" ಸ್ಥಗಿತಗೊಳಿಸಿದ್ದರು ಮತ್ತು ನ್ಯಾಯಾಲಯಕ್ಕೆ ಹಾಜರಾಗಿದ್ದರು, ಕೋರ್ಟ್ ರಾಹುಲ್ ಗಾಂಧಿಗೆ ಜಾಮೀನು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT