ಅರವಿಂದ್ ಕೇಜ್ರಿವಾಲ್ 
ದೇಶ

Delhi excise policy case: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 3 ದಿನ CBI ವಶಕ್ಕೆ

ಕೇಂದ್ರೀಯ ತನಿಖಾ ಸಂಸ್ಥೆಯು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲಾಗಿದೆ.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಈ ವೇಳೆ ನ್ಯಾಯಾಧೀಶರು ಕೇಜ್ರಿವಾಲ್ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ. ವಿಶೇಷ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಸಿಬಿಐ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶವನ್ನು ನೀಡಿದ್ದಾರೆ.

ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ತನಿಖಾ ಸಂಸ್ಥೆ ಬುಧವಾರ ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತ್ತು. ಇದೀಗ 3 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.

ಜಾರಿ ಇಲಾಖೆ (ಇಡಿ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಕೂಡ ಆಗಿರುವ ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ್ದಾರೆ.

ಕೇಜ್ರಿವಾಲ್ ಅವರ ಕಸ್ಟಡಿಗೆ ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಪ್ರಕರಣದಲ್ಲಿ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಲು ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ಪ್ರಕರಣದಲ್ಲಿ ಆರೋಪಿ ಗಳಾಗಿರುವ ಇತರ ವ್ಯಕ್ತಿಗಳ ಸಾಕ್ಷ್ಯಾಧಾರಗಳೊಂದಿಗೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರನ್ನು ವಿಚಾರಣೆ ನಡೆಸಬೇಕಿದೆ ಎಂದು ಸಿಬಿಐ ಹೇಳಿದೆ.

ಈಗ ರದ್ದಾದ ಅಬಕಾರಿ ನೀತಿಯನ್ನು ರೂಪಿಸಲು "ಸೌತ್ ಲಾಬಿ" ಎಂದು ಕರೆಯಲ್ಪಡುವವರು ನಿರ್ದೇಶಿಸಿದ್ದಾರೆ ಮತ್ತು ಮುಖ್ಯಮಂತ್ರಿಗಳು ಈ ಎಲ್ಲದರಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖಾ ಸಂಸ್ಥೆಗಳು ಈ ಹಿಂದೆ ಆರೋಪಿಸಿದ್ದವು. ಇದೇ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಪುತ್ರಿ ಕೆಚಂದ್ರಶೇಖರ್ ರಾವ್ ಪುತ್ರಿ ಕವಿತಾ ಕೂಡ ವಿಚಾರಣೆ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT