JNUSU ಪ್ರತಿಭಟನೆ 
ದೇಶ

NEET-UG ಅಕ್ರಮಗಳ ವಿರುದ್ಧ ಜಂತರ್ ಮಂತರ್‌ನಲ್ಲಿ JNUSU ಪ್ರತಿಭಟನೆ, ಮರು ಪರೀಕ್ಷೆಗೆ ಆಗ್ರಹ

ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿನ ಅಕ್ರಮಗಳ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು.

ನವದೆಹಲಿ: ನೀಟ್‌-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ(ಜೆಎನ್‌ಯುಎಸ್‌ಯು) ಬುಧವಾರ ಇಲ್ಲಿನ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿತು.

ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿನ ಅಕ್ರಮಗಳ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಮತ್ತು ಎನ್‌ಟಿಎ ರದ್ದುಗೊಳಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಎಡ-ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿ ಸಂಘ(AlSA) ಮತ್ತು ದೆಹಲಿ ವಿಶ್ವವಿದ್ಯಾಲಯದ ಕ್ರಾಂತಿಕಾರಿ ಯುವ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ವಿದ್ಯಾರ್ಥಿಗಳು ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳು "ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಮತ್ತು ಎನ್ ಟಿಎ ರದ್ದುಗೊಳಿಸಬೇಕು ಎಂಬ ಘೋಷಣೆಗಳಿರುವ ಭಿತ್ತಿಪತ್ರಗಳು ಮತ್ತು ಫಲಕಗಳನ್ನು ಹಿಡಿದು ಪ್ರತಿಭಟಿಸಿದರು.

NEET-UG ಪರೀಕ್ಷೆಯನ್ನು ಮತ್ತೆ ನಡೆಸಬೇಕು ಮತ್ತು ಪರೀಕ್ಷೆಗಳ ಕೇಂದ್ರೀಕರಣವನ್ನು ಕೊನೆಗೊಳಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪಿಎಚ್‌ಡಿ ಪ್ರವೇಶಕ್ಕಾಗಿ ಎನ್‌ಟಿಎ ನಡೆಸಿದ ಪರೀಕ್ಷೆಗಳನ್ನು ಸಹ ರದ್ದುಗೊಳಿಸಬೇಕೆಂದು ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ.

ಪರೀಕ್ಷೆಗಳಲ್ಲಿ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ನಂತರ UGC-NET ಮತ್ತು NET PG ಸೇರಿದಂತೆ ಎನ್ ಟಿಎ ನಡೆಸಿದ ಹಲವು ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT