ಕೇರಳ ಹೈಕೋರ್ಟ್ TNIE
ದೇಶ

ಕೆಲಸಕ್ಕೆಂದು ಪಾಕಿಸ್ತಾನಕ್ಕೆ ಹೋದ ಭಾರತೀಯ 'ಶತ್ರು' ಅಲ್ಲ: ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ನ್ಯಾಯಾಲಯವು ಕರಾಚಿಯ ಹೋಟೆಲ್‌ನಲ್ಲಿ ಕೆಲಕಾಲ ಕೆಲಸ ಮಾಡಿದ್ದ ಅರ್ಜಿದಾರರ ತಂದೆ ಕುಂಜಿ ಕೋಯಾ ಅವರ ಆಸ್ತಿಗಳ ವಿರುದ್ಧ ಶತ್ರು ಆಸ್ತಿ ಕಾಯ್ದೆಯಡಿಯಲ್ಲಿ ಆರಂಭಿಸಲಾದ ವಿಚಾರಣೆಯನ್ನು ರದ್ದುಗೊಳಿಸಿದೆ.

ಕೊಚ್ಚಿ: ಭಾರತ ರಕ್ಷಣಾ ಕಾಯಿದೆ 1971ರ ನಿಯಮ 130 ಮತ್ತು 138ರ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕೆಲಸ ಹುಡುಕಿಕೊಂಡು ಪಾಕಿಸ್ತಾನಕ್ಕೆ ಹೋಗಿರುವುದರಿಂದ ಶತ್ರುವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಶತ್ರುವಿನ ಜತೆ ವ್ಯವಹಾರ ಮಾಡದ ಹೊರತು ಈ ಕಾಯ್ದೆಯಡಿ ಶತ್ರುವಾಗುವುದಿಲ್ಲ ಎಂದೂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಅರ್ಜಿದಾರರಾದ ಪಿ. ಉಮರ್ ಕೋಯಾ ಅವರು ತಮ್ಮ ತಂದೆ ಕುಂಜಿಕೋಯ ತಮ್ಮ ಸಂಬಂಧಿಕರಿಂದ ಕೆಲವು ಜಮೀನು ಮತ್ತು ಆಸ್ತಿಯನ್ನು ಖರೀದಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಈ ತೀರ್ಪು ಬಂದಿದೆ. ಅಲ್ಲದೆ ನ್ಯಾಯಾಲಯವು ಕರಾಚಿಯ ಹೋಟೆಲ್‌ನಲ್ಲಿ ಕೆಲಕಾಲ ಕೆಲಸ ಮಾಡಿದ್ದ ಅರ್ಜಿದಾರರ ತಂದೆ ಕುಂಜಿ ಕೋಯಾ ಅವರ ಆಸ್ತಿಗಳ ವಿರುದ್ಧ ಶತ್ರು ಆಸ್ತಿ ಕಾಯ್ದೆಯಡಿಯಲ್ಲಿ ಆರಂಭಿಸಲಾದ ವಿಚಾರಣೆಯನ್ನು ರದ್ದುಗೊಳಿಸಿದೆ.

ಈ ಪ್ರಕರಣವು ಉಮರ್ ಕೋಯಾ ಎಂಬ ವ್ಯಕ್ತಿಯದ್ದಾಗಿದೆ. ಮಲಪ್ಪುರಂ ನಿವಾಸಿ ಉಮರ್ ಕೋಯಾ ತಮ್ಮ ತಂದೆಯ ಆಸ್ತಿಯನ್ನು ಶತ್ರು ಆಸ್ತಿ ಕಾಯ್ದೆ 1968ರ ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಾಸ್ತವವಾಗಿ, ಒಮರ್ ಕೋಯಾ ಅವರ ತಂದೆ ಕುಂಜಿ ಕೋಯಾ ಅವರು 1953ರಲ್ಲಿ ಕೆಲಸ ಹುಡುಕಿಕೊಂಡು ಪಾಕಿಸ್ತಾನದ ಕರಾಚಿಗೆ ಹೋಗಿದ್ದರು. ಅಲ್ಲಿ ಕೆಲಕಾಲ ಹೊಟೇಲ್‌ನಲ್ಲಿ ಸಹಾಯಕರಾಗಿ ಕೆಲಸ ಮಾಡಿದರು. ನಂತರ ಅವರು ಭಾರತಕ್ಕೆ ಮರಳಿದರು. 1995ರಲ್ಲಿ ಮಲಪ್ಪುರಂನಲ್ಲಿ ಮೃತಪಟ್ಟಿದ್ದರು.

ಉಮರ್ ಕೋಯಾ ಕೇರಳ ಪೊಲೀಸ್ ಸೇವೆಯಿಂದ ನಿವೃತ್ತರಾಗಿದ್ದಾರೆ. 2022-23ರ ಆಸ್ತಿ ತೆರಿಗೆಯನ್ನು ಜಮಾ ಮಾಡಲು ಹೋದಾಗ ತೆರಿಗೆ ವಸೂಲಿ ಮಾಡಲು ನಿರಾಕರಿಸಿದ್ದರು. ಆಸ್ತಿ ಮೇಲೆ ತೆರಿಗೆ ಸಂಗ್ರಹಿಸದಂತೆ ತಹಸೀಲ್ದಾರ್ ಸೂಚನೆ ನೀಡಿದ್ದಾರೆ ಎಂದು ಗ್ರಾಮಾಧಿಕಾರಿ (ವಿಒ) ಅವರಿಗೆ ತಿಳಿಸಿದರು. ಈ ಸೂಚನೆಯನ್ನು 'ಕಸ್ಟೋಡಿಯನ್ ಆಫ್ ಎನಿಮಿ ಪ್ರಾಪರ್ಟಿ ಆಫ್ ಇಂಡಿಯಾ' (CEPI) ಅಡಿಯಲ್ಲಿ ನೀಡಲಾಗಿತ್ತು.

ತನ್ನ ತಂದೆಯನ್ನು ಪಾಕಿಸ್ತಾನಿ ಪ್ರಜೆ ಎಂದು ಕರೆಯುವ ಮೂಲಕ ಪೊಲೀಸರು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಉಮರ್ ಕೋಯಾ ನ್ಯಾಯಾಲಯಕ್ಕೆ ತಿಳಿಸಿದರು. ತನ್ನ ತಂದೆಯನ್ನು ಭಾರತೀಯ ಪ್ರಜೆ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಕುಂಜಿ ಕೋಯಾ ಭಾರತೀಯ ಪ್ರಜೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. 'ಭಾರತದ ಶತ್ರು ಆಸ್ತಿಯ ಕಸ್ಟೋಡಿಯನ್' ಅವರು ಯಾವುದೇ ಶತ್ರುಗಳೊಂದಿಗೆ ವ್ಯಾಪಾರ ಮಾಡಿದರು ಅಥವಾ ಶತ್ರು ಸಂಸ್ಥೆಯೊಂದಿಗೆ ಯಾವುದೇ ವ್ಯವಹಾರ ಸಂಬಂಧವನ್ನು ಹೊಂದಿದ್ದರು ಎಂಬುದನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ಆದ್ದರಿಂದ, ನ್ಯಾಯಾಲಯವು ಭಾರತದ ಶತ್ರು ಆಸ್ತಿಯ ಕಸ್ಟೋಡಿಯನ್ ನ ಪ್ರಕ್ರಿಯೆಗಳನ್ನು ರದ್ದುಗೊಳಿಸಿತು ಮತ್ತು ಅರ್ಜಿದಾರರಿಂದ ಆಸ್ತಿ ತೆರಿಗೆ ಸಂಗ್ರಹಿಸಲು ಕಂದಾಯ ಅಧಿಕಾರಿಗಳಿಗೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT