ಸಂಗ್ರಹ ಚಿತ್ರ 
ದೇಶ

Ragging ಪರಿಣಾಮ ಕಿಡ್ನಿ ಕಳೆದುಕೊಂಡ ಎಂಬಿಬಿಎಸ್ ವಿದ್ಯಾರ್ಥಿ!

ಹಿರಿಯ ವಿದ್ಯಾರ್ಥಿಗಳಿಂದ ರಾಗಿಂಗ್ ಗೆ ಒಳಗಾದ ಪರಿಣಾಮ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ನಾಲ್ಕು ಬಾರಿ ಡಯಾಲಿಸಿಸ್ ಮೊರೆ ಹೋಗಬೇಕಾದ ಘಟನೆ ಡುಂಗರಪುರ ವೈದ್ಯಕೀಯ ಕಾಲೇಜಿನಲ್ಲಿ ವರದಿಯಾಗಿದೆ.

ನವದೆಹಲಿ: ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್  ಗೆ ಒಳಗಾದ ಪರಿಣಾಮ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ನಾಲ್ಕು ಬಾರಿ ಡಯಾಲಿಸಿಸ್ ಮೊರೆ ಹೋಗಬೇಕಾದ ಘಟನೆ ಡುಂಗರಪುರ ವೈದ್ಯಕೀಯ ಕಾಲೇಜಿನಲ್ಲಿ ವರದಿಯಾಗಿದೆ.

ರ್ಯಾಗಿಂಗ್ ಗೆ ಒಳಗಾಗಿದ್ದ ವಿದ್ಯಾರ್ಥಿಯ ಕಿಡ್ನಿಗೆ ಸೋಂಕು ತಗುಲಿತ್ತು. ಡುಂಗರಪುರ ಪೊಲೀಸ್ ಠಾಣೆಯ ಎಸ್ ಹೆಚ್ಒ ಗಿರ್ಧಾರಿ ಸಿಂಗ್ ಮಾಹಿತಿಯ ಪ್ರಕಾರ, ಮೇ 15 ರಂದು ದ್ವಿತೀಯ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 300 ಸಿಟ್ ಅಪ್ಸ್ ಮಾಡುವಂತೆ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿದ್ದಾರೆ. ಪರಿಣಾಮ ಆತನ ಮೂತ್ರಪಿಂಡಗಳ ಮೇಲೆ ತೀವ್ರವಾದ ಒತ್ತಡ ಉಂಟಾಗಿದ್ದು, ಸೋಂಕು ತಗುಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನನ್ನು ಅಹಮದಾಬಾದ್‌ನಲ್ಲಿ ಒಂದು ವಾರದವರೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಮಯದಲ್ಲಿ ನಾಲ್ಕು ಬಾರಿ ಡಯಾಲಿಸಿಸ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ, ವಿದ್ಯಾರ್ಥಿಯು ಈಗ ಸ್ಥಿರವಾಗಿದ್ದಾನೆ.

ವಿದ್ಯಾರ್ಥಿ ಮರಳಿ ಕಾಲೇಜಿಗೆ ಬರಲು ಆರಂಭಿಸಿದ್ದಾನೆ. ಸಂಸ್ಥೆಯ ರ್ಯಾಗಿಂಗ್ ವಿರೋಧಿ ಸಮಿತಿಯ ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಕಾಲೇಜು ಪ್ರಾಂಶುಪಾಲರು 7 ಆರೋಪಿಗಳ ವಿರುದ್ಧ ದೂರು ನೀಡಿದ್ದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ಹೇಳಿದ್ದಾರೆ.

"ಸಂತ್ರಸ್ತ ವಿದ್ಯಾರ್ಥಿ ಈ ಹಿಂದೆಯೂ ರ್ಯಾಗಿಂಗ್ ಎದುರಿಸಿದ್ದರು ಆದರೆ ದೂರು ನೀಡಿರಲಿಲ್ಲ. ಕಾಲೇಜು ಪ್ರಾಧಿಕಾರವು ಜೂನ್ 20 ರಂದು ಆನ್‌ಲೈನ್ ಪೋರ್ಟಲ್ ಮೂಲಕ ದೂರು ಸ್ವೀಕರಿಸಿದ ನಂತರ ವಿಚಾರಣೆ ನಡೆಸಿದ ನಂತರ ಇತ್ತೀಚಿನ ಘಟನೆ ಬೆಳಕಿಗೆ ಬಂದಿದೆ" ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಏಳು ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 143 (ಕಾನೂನುಬಾಹಿರ ಸಭೆ), 147 (ಗಲಭೆ), 149 (ಅಪರಾಧ), 341 (ತಪ್ಪು ನಿರ್ಬಂಧ) ಮತ್ತು 352 (ಹಲ್ಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT