ದೆಹಲಿ ಜಲ ಸಚಿವೆ ಅತಿಶಿ 
ದೇಶ

ದೆಹಲಿ ಜಲ ಸಚಿವೆ ಅತಿಶಿ LNJP ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಚಿವೆ ಅತಿಶಿ ಅವರು ಇಂದು ಬೆಳಗ್ಗೆ 10.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಹರಿಯಾಣ ಸರ್ಕಾರ ನಮ್ಮ ಪಾಲಿನ ನೀರು ಹರಿಸಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಸಚಿವೆ ಅತಿಶಿ ಅವರು ಗುರುವಾರ ಬೆಳಗ್ಗೆ ಎಲ್‌ಎನ್‌ಜೆಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಚಿವೆ ಅತಿಶಿ ಅವರು ಇಂದು ಬೆಳಗ್ಗೆ 10.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಜೆಪಿ ಆಡಳಿತವಿರುವ ಹರಿಯಾಣ, ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಎಎಪಿ ನಾಯಕಿ ಮತ್ತು ದೆಹಲಿಯ ಜಲ ಸಚಿವೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಕುಳಿತಿದ್ದರು. ಐದು ದಿನಗಳ ಉಪವಾಸ ಸತ್ಯಾಗ್ರಹದ ನಂತರ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾದ ನಂತರ ಮಂಗಳವಾರ ಬೆಳ್ಳಂಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಆರಂಭದಲ್ಲಿ ಅತಿಶಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು ಮತ್ತು ನಂತರ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ ನಂತರ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಸಿಪಿಎಂ ನಾಯಕಿ ವೃಂದಾ ಕಾರಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ಅತಿಶಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT