ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್: ರೈಲಿನಲ್ಲಿ ಮಧ್ಯದ ಬರ್ತ್ ಕೊಂಡಿ ಕಳಚಿ ಬಿದ್ದು ಕೆಳಗಿನ ಬರ್ತ್ ನಲ್ಲಿ ಮಲಗಿದ್ದ ಕೇರಳ ಮೂಲದ ವೃದ್ಧ ಸಾವು!

ಕೇರಳದ 60 ವರ್ಷದ ಅಲಿ ಖಾನ್ ಟಿಕೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಮಿಲೇನಿಯಂ ಎಕ್ಸ್‌ಪ್ರೆಸ್‌ನಲ್ಲಿ ತ್ರಿಶೂರ್‌ನಿಂದ ಆಗ್ರಾ ಕಂಟೋನ್ಮೆಂಟ್‌ಗೆ ಪ್ರಯಾಣಿಸುತ್ತಿದ್ದರು.

ಹೈದರಾಬಾದ್: ಸ್ಲೀಪರ್ ಕೋರ್ ರೈಲಿನ ಕೆಳಗಿನ ಬರ್ತ್ ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಮಧ್ಯದ ಬರ್ತ್ ನ ಕೊಕ್ಕೆ ಬೇರ್ಪಟ್ಟು ಯುವಕ ಬಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ಘಟನೆ ಹೈದಾರಾಬಾದ್ ನಲ್ಲಿ ನಡೆದಿದೆ.

ಕೇರಳದ 60 ವರ್ಷದ ಅಲಿ ಖಾನ್ ಟಿಕೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಮಿಲೇನಿಯಂ ಎಕ್ಸ್‌ಪ್ರೆಸ್‌ನಲ್ಲಿ ತ್ರಿಶೂರ್‌ನಿಂದ ಆಗ್ರಾ ಕಂಟೋನ್ಮೆಂಟ್‌ಗೆ ಪ್ರಯಾಣಿಸುತ್ತಿದ್ದರು. ಅವರು ಸ್ಲೀಪರ್ ಕೋಚ್‌ನ ಕೆಳಗಿನ ಬರ್ತ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯದ ಬರ್ತ್ ನ ಚೈನ್ ಸರಿಯಾಗಿ ಲಾಕ್ ಮಾಡಲಾಗಿತ್ತು ಎಂದು ವರದಿಯಾಗಿದೆ. ಆದರೆ ಪ್ರಯಾಣದ ಸಮಯದಲ್ಲಿ, ಕೊಕ್ಕೆ ಬೇರ್ಪಟ್ಟಿದೆ. ಮಧ್ಯದ ಬರ್ತ್ ಅವರ ಮೇಲೆ ಬಿದ್ದು ಕುತ್ತಿಗೆಗೆ ಗಾಯವಾಗಿತ್ತು. ಪರಿಣಾಮ ಆತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಸಿಬ್ಬಂದಿ ಸಂಜೆ 6.30 ರ ಸುಮಾರಿಗೆ ಘಟನೆಯ ಬಗ್ಗೆ ಮಾಹಿತಿ ಪಡೆದು, ರಾಮಗುಂಡಂನಲ್ಲಿ ರೈಲು ನಿಲ್ಲಿಸಿ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅಲಿ ಅವರನ್ನು ವಾರಂಗಲ್‌ನ ಖಾಸಗಿ ಆಸ್ಪತ್ರೆಗೆ ಮತ್ತು ಹೈದರಾಬಾದ್‌ನ ಬೇಗಂಪೇಟೆಯಲ್ಲಿರುವ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂನ್ 24ರಂದು ಮೃತಪಟ್ಟಿದ್ದು, ಮಂಚೇರಿಯಲ್ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏತನ್ಮಧ್ಯೆ, ರೈಲ್ವೇ ಸಚಿವಾಲಯದ ಅಧಿಕೃತ ವಕ್ತಾರರು ಎಕ್ಸ್‌ನಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, “ಆಸನವು ಹಾನಿಗೊಳಗಾದ ಸ್ಥಿತಿಯಲ್ಲಿಲ್ಲ, ಅದು ಕೆಳಗೆ ಬಿದ್ದಿಲ್ಲ ಅಥವಾ ಕುಸಿದಿಲ್ಲ ಅಥವಾ ಬಿದ್ದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ನಿಜಾಮುದ್ದೀನ್ ನಿಲ್ದಾಣದಲ್ಲಿ ಆಸನವನ್ನು ಪರಿಶೀಲಿಸಲಾಯಿತು, ಅದರಲ್ಲಿ ಯಾವುದೇ ತೊಂದರೆ ಕಂಡು ಬಂದಿಲ್ಲ. ಮೇಲಿನ ಬರ್ತ್‌ನಲ್ಲಿರುವವರು ಸರಿಯಾಗಿ ಸರಪಳಿಯನ್ನು ಹಾಕದೇ ಇದ್ದ ಕಾರಣ ಮೇಲಿನ ಸೀಟು ಕೆಳಗೆ ಬಿದ್ದಿದೆ. ಇದರಿಂದ ಈ ಅವಘಡ ಉಂಟಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT