ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ online desk
ದೇಶ

ಮಹಾಯುತಿಯಿಂದ ಅಜಿತ್ ಪವಾರ್ ನ್ನು ಕೈಬಿಡಿ: ಬಿಜೆಪಿ ನಾಯಕನ ಆಗ್ರಹ!

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದಲ್ಲಿ ಅಪಸ್ವರವೆದ್ದಿರುವ ಲಕ್ಷಣಗಳು ಗೋಚರಿಸುತ್ತಿವೆ.

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದಲ್ಲಿ ಅಪಸ್ವರವೆದ್ದಿರುವ ಲಕ್ಷಣಗಳು ಗೋಚರಿಸುತ್ತಿವೆ.

ಮಹಾರಾಷ್ಟ್ರದ ಪುಣೆಯ ಶಿರೂರ್ ನ ಬಿಜೆಪಿ ಪದಾಧಿಕಾರಿಯೊಬ್ಬರು ಡಿಸಿಎಂ ಅಜಿತ್ ಪವಾರ್ ಹಾಗೂ ಅವರ ನೇತೃತ್ವದ ಎನ್ ಸಿಪಿಯನ್ನು ಆಡಳಿತಾರೂಢ ಮೈತ್ರಿಯಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

ಶಿರೂರ್ ತಹಶೀಲ್ ನ ಉಪಾಧ್ಯಕ್ಶ್ಜಸುದರ್ಶನ್ ಚೌಧರಿ ಪಕ್ಷದ ಸಭೆಯಲ್ಲಿ ಈ ಮನವಿ ಮಾಡಿದ್ದು, ಇದರ ವಿಡಿಯೋ ವೈರಲ್ ಆಗತೊಡಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎನ್ ಸಿಪಿ ತೀವ್ರ ಆಕ್ರೋಶ ಹೊರಹಾಕಿದ್ದು, ಎನ್ ಸಿಪಿ ಕಾರ್ಯಕರ್ತರು ಬಿಜೆಪಿ ಪದಾಧಿಕಾರಿಯನ್ನು ಸುತ್ತುವರೆದು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ.

"ಇದು ನಿಮಗೆ ಸಲಹೆಯಾಗಿದೆ. ಪಕ್ಷದ ಕಾರ್ಯಕರ್ತರು ಏನು ಯೋಚಿಸುತ್ತಿದ್ದಾರೆ ಎಂಬುದನ್ನು ಆಲಿಸಿ. ನೀವು ನಿಜವಾಗಿಯೂ ನಿರ್ಧಾರ ತೆಗೆದುಕೊಳ್ಳಲು ಬಯಸಿದರೆ, ಅಜಿತ್ ಪವಾರ್ ಅವರನ್ನು ಮಹಾಯುತಿ (ಆಡಳಿತದ ಮೈತ್ರಿ) ನಿಂದ ತೆಗೆದುಹಾಕಿ," ಎಂದು ಚೌಧರಿ ವೀಡಿಯೊದಲ್ಲಿ ಬಿಜೆಪಿ ನಾಯಕತ್ವಕ್ಕೆ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT