ಹೇಮಂತ್ ಸೊರೆನ್ 
ದೇಶ

ಭೂ ಹಗರಣ ಪ್ರಕರಣ: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಗೆ ಜಾಮೀನು ಮಂಜೂರು

ಭೂ ಹಗರಣ ಕೇಸ್ ನಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಅಲ್ಲಿನ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಜಾರ್ಖಂಡ್: ಭೂ ಹಗರಣ ಕೇಸ್ ನಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಅಲ್ಲಿನ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ನಕಲಿ ದಾಖಲೆಗಳ ಮೂಲಕ ಹಲವಾರು ಕೋಟಿ ರೂಪಾಯಿ ಮೌಲ್ಯದ ದೊಡ್ಡ ಪ್ರಮಾಣದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ದಾಖಲೆಗಳನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಸೊರೆನ್ ಅವರನ್ನು ಜನವರಿ 31 ರಂದು ಬಂಧಿಸಿ, ರಾಂಚಿಯ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿನಲ್ಲಿ ಇರಿಸಿತ್ತು.

ಪ್ರಕರಣದ ತನಿಖೆಯ ಭಾಗವಾಗಿ ಸೋರೆನ್, ಐಎಎಸ್ ಅಧಿಕಾರಿ ಮತ್ತು ರಾಂಚಿಯ ಮಾಜಿ ಜಿಲ್ಲಾಧಿಕಾರಿ ಛವಿ ರಂಜನ್, ಭಾನು ಪ್ರತಾಪ್ ಪ್ರಸಾದ್ ಸೇರಿದಂತೆ 25 ಕ್ಕೂ ಹೆಚ್ಚು ಜನರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಬಂಧನದ ಸಮಯದಲ್ಲಿ, ಸೋರೆನ್ ತನ್ನ ವಿರುದ್ಧದ ಭೂ ಕಬಳಿಕೆ ಆರೋಪವನ್ನು ಬಲವಾಗಿ ನಿರಾಕರಿಸಿದ್ದರು. ರಾಜಕೀಯ ಸೇಡಿನ ಭಾಗವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ವಿರುದ್ಧ ಹಣ ವರ್ಗಾವಣೆ ಪ್ರಕರಣವನ್ನು ಹೂಡಿದೆ ಎಂದು ಹೇಳಿದ್ದರು.

ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ನಿಮಿಷಗಳಲ್ಲಿ ಅವರನ್ನು ಜನವರಿ 31 ರಂದು ರಾಂಚಿ ರಾಜಭವನದಿಂದ ಬಂಧಿಸಲಾಗಿತ್ತು.

ಸೊರೆನ್ ಮತ್ತಿತರ 11 ಆರೋಪಿಗಳನ್ನು ರಾಂಚಿಯ ವಿಶೇಷ ನ್ಯಾಯಾಲಯಕ್ಕೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ, ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಿತ್ತು. ಆದರೆ, ಈ ತೀರ್ಪನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT