ವಿಮಾನ ನಿಲ್ದಾಣ ಮೇಲ್ಛಾವಣಿ ಕುಸಿತದಿಂದ ಕಾರು ಜಖಂ
ದೇಶ

ಭಾರಿ ಮಳೆ: ಮೂರು ತಿಂಗಳ ಹಿಂದಷ್ಟೇ ಉದ್ಘಾಟನೆಯಾದ ಜಬಲ್‌ಪುರ ವಿಮಾನ ನಿಲ್ದಾಣದ ಮೇಲ್ಫಾವಣಿ ಕುಸಿತ!

ಮೂರು ತಿಂಗಳ ಹಿಂದೆ ಮಾರ್ಚ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಕಟ್ಟಡದ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಭ್ರಷ್ಟಾಚಾರದ ಆರೋಪ ಮಾಡಿದೆ.

ಭೋಪಾಲ್: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ದುಮ್ನಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಮುಂಭಾಗದ ಫ್ಯಾಬ್ರಿಕ್ ಮೇಲ್ಛಾವಣಿಯ ಭಾಗವೊಂದು ಕುಸಿದಿದೆ. ಮೂರು ತಿಂಗಳ ಹಿಂದೆ ಮಾರ್ಚ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಕಟ್ಟಡದ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಭ್ರಷ್ಟಾಚಾರದ ಆರೋಪ ಮಾಡಿದೆ.

ಹೆಚ್ಚಿನ ಪ್ರಮಾಣದ ನೀರಿನ ಸಂಗ್ರಹಣೆಯಿಂದ ಉಂಟಾದ ಈ ದುರ್ಘಟನೆಯಿಂದಾಗಿ ಮೇಲ್ಫಾವಣಿಯ ಅಡಿಯಲ್ಲಿ ನಿಲ್ಲಿಸಲಾದ ಸರ್ಕಾರಿ ಅಧಿಕಾರಿಯ ಕಾರು ಜಖಂಗೊಂಡಿದೆ. ಆದಾಗ್ಯೂ, ಅದೃಷ್ಟವಶಾತ್, ಸರ್ಕಾರಿ ಅಧಿಕಾರಿ ಮತ್ತು ಚಾಲಕ ಘಟನೆಗೂ ಮುನ್ನಾ ಕಾರಿನಿಂದ ಇಳಿದಿದ್ದು, ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ. ಸರ್ಕಾರಿ ಅಧಿಕಾರಿ (ಬಹುಶಃ ಆದಾಯ ತೆರಿಗೆ ಇಲಾಖೆಯ ಅಧಿಕಾರಿ) ವಿಮಾನ ನಿಲ್ದಾಣದ ಒಳಗೆ ಹೋಗಲು ಕಾರಿನಿಂದ ಹೊರಬಂದ ನಂತರ ಬೆಳಿಗ್ಗೆ 11.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಮುಂಭಾಗದಲ್ಲಿ ಅಲಂಕಾರಿಕ ಉದ್ದೇಶಗಳಿಗಾಗಿ ಫ್ಯಾಬ್ರಿಕ್ ಮೇಲ್ಛಾವಣಿ ನಿರ್ಮಿಸಲಾಗಿದೆ. ಭಾರೀ ಮಳೆಯಿಂದಾಗಿ ಅದರ ಒಂದು ಭಾಗದಲ್ಲಿ ಮಳೆ ನೀರು ಸ್ಥಳೀಯವಾಗಿ ಶೇಖರಣೆಯಾಗಿ ಕುಸಿತ ಉಂಟಾಗಿದೆ. ಇದು ಕಾರಿನ ಛಾವಣಿ ಮತ್ತು ಕಿಟಕಿಗಳಿಗೆ ಹಾನಿಯನ್ನುಂಟುಮಾಡಿದೆ. ಘಟನೆಯ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಈ ವಿಷಯದಲ್ಲಿ ತಾಂತ್ರಿಕ ತನಿಖೆಗೆ ತಕ್ಷಣ ಆದೇಶಿಸಲಾಗಿದೆ ಎಂದು ಜಬಲ್‌ಪುರ ವಿಮಾನ ನಿಲ್ದಾಣದ ನಿರ್ದೇಶಕ ರಾಜೀವ್ ರತನ್ ಪಾಂಡೆ ತಿಳಿಸಿದ್ದಾರೆ.

ಈ ಮಧ್ಯೆ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ. ಮಧ್ಯ ಪ್ರದೇಶ ಭ್ರಷ್ಟಾಚಾರದ ಭದ್ರಕೋಟೆಯಾಗಿ ಮಾರ್ಪಟ್ಟಿದೆ. ಮುಖ್ಯಮಂತ್ರಿ ಯಾದವ್, ಬಿಜೆಪಿ ಭ್ರಷ್ಟಾಚಾರ ಮಾಡದ ಯಾವುದೇ ಸ್ಥಳ ಉಳಿದಿದೆಯೇ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT