ಜಲಾವೃತವಾಗಿರುವ ದೆಹಲಿ ರಸ್ತೆ  
ದೇಶ

88 ವರ್ಷಗಳ ಬಳಿಕ ದಾಖಲೆಯ ವರ್ಷಧಾರೆ: ಬಿರುಮಳೆಗೆ ತತ್ತರಿಸಿದ ರಾಷ್ಟ್ರ ರಾಜಧಾನಿ; ಮಳೆ ಸಂಬಂಧಿತ ಅವಘಡಕ್ಕೆ 7 ಬಲಿ

ಮುಂಜಾನೆ 4 ಗಂಟೆಯಿಂದ 8.30 ಗಂಟೆಯವರೆಗೆ ಮಳೆ ಸುರಿದಿದ್ದು, ದೆಹಲಿಯ ಪ್ರಮುಖ ಭಾಗಗಳು ಹಾಗೂ ಹಲವು ಪ್ರದೇಶಗಳು ಜಲಾವೃತಗೊಂಡಿವೆ. 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.

ನವದೆಹಲಿ: ಬಿಸಿಗಾಳಿ, ಬಿರುಬೇಸಿಗೆಯಿಂದ ತತ್ತರಿಸಿದ್ದ ದೆಹಲಿಗೆ ಶುಕ್ರವಾರ ಮುಂಗಾರು ಪ್ರವೇಶಿಸಿದೆ. ಮೊದಲ ದಿನವೇ 88 ವರ್ಷಗಳ ದಾಖಲೆಯ 23 ಸೆಂ.ಮೀ. ಮಳೆಯಾಗಿದ್ದು, ರಾಜಧಾನಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. 88 ವರ್ಷಗಳ ಬಳಿಕ ಸುರಿದ ವರ್ಷಧಾರೆಗೆ ತತ್ತರಿಸಿ ಹೋಗಿದೆ.

ಮುಂಜಾನೆ 4 ಗಂಟೆಯಿಂದ 8.30 ಗಂಟೆಯವರೆಗೆ ಮಳೆ ಸುರಿದಿದ್ದು, ದೆಹಲಿಯ ಪ್ರಮುಖ ಭಾಗಗಳು ಹಾಗೂ ಹಲವು ಪ್ರದೇಶಗಳು ಜಲಾವೃತಗೊಂಡಿವೆ. 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಮೊದಲ ಸಾವು ವರದಿಯಾಗಿದೆ, 45 ವರ್ಷದ ಕ್ಯಾಬ್ ಡ್ರೈವರ್ ಕಾರಿನ ಮೇಲೆ ಮೇಲ್ಚಾವಣಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮಳೆಯಿಂದಾಗಿ ವಸಂತ ವಿಹಾರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಸಂಜೆ ಮಳೆಯ ನೀರಿನ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ನೀರು ಮನೆಗಳಿಗೆ ನುಗ್ಗಿತು, ವಾಹನಗಳು ಮುಳುಗಿವೆ. ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತವಾಗಿ ಭಾರೀ ಟ್ರಾಫಿಕ್ ಗೆ ಕಾರಣವಾಯಿತು, ಟ್ರಾಫಿಕ್ ತೆರವುಗೊಳಿಸಲು ಗಂಟೆಗಟ್ಟಲೇ ಸಮಯ ತೆಗೆದುಕೊಂಡಿತು. ಇದರಿಂದ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು.

ಸಫ್ದರ್‌ಜಂಗ್ ಸ್ವಯಂಚಾಲಿತ ಹವಾಮಾನ ಕೇಂದ್ರವು 24 ಗಂಟೆಗಳಲ್ಲಿ 228.1 ಮಿಮೀ ಮಳೆಯನ್ನು ದಾಖಲಿಸಿದೆ, ಇದು 1936 ರಿಂದ 235 ಮಿಮೀ ಮಳೆಯಾದ ನಂತರ ಎರಡನೇ ಅತಿ ಹೆಚ್ಚುಮಳೆಯಾಗಿ ದಾಖಲೆ ಬರೆದಿದೆ. ಜೂನ್‌ನಲ್ಲಿ ಇದುವರೆಗೆ 234.5 ಮಿಮೀ ವಾಡಿಕೆ ಮಳೆಯಾಗಿದೆ. 88 ವರ್ಷಗಳ ಬಳಿಕ ದೆಹಲಿಯಲ್ಲಿಒಂದೇ ದಿನ ಭಾರಿ ಪ್ರಮಾಣದ ಮಳೆಯಾಗಿದೆ. ಮುಂಗಾರು ಆರಂಭದ ಜೂನ್‌ನಲ್ಲಿ ಸಾಮಾನ್ಯವಾಗಿ ಸರಾಸರಿ 80.6 ಮಿ.ಮೀ ಮಳೆಯಾಗುತ್ತದೆ. ಆದರೆ, 24 ಗಂಟೆ ಅವಧಿಯಲ್ಲಿನಾಲ್ಕು ಪಟ್ಟು ಹೆಚ್ಚು ಮಳೆ ಸುರಿದಿದೆ. ಅಂದರೆ ಸುಮಾರು 640 ಮಿ.ಮೀ.ಮಳೆಯಾಗಿದೆ. ದೆಹಲಿಯಲ್ಲಿ ಸಾಮಾನ್ಯವಾಗಿ ಜೂನ್‌ನಲ್ಲಿ ಸರಾಸರಿ 80.6 ಮಿಮೀ. (ಸೆಂ.ಮೀ.) ಮಳೆಯಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!