ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಬಿಹಾರಕ್ಕೆ 'ವಿಶೇಷ ಸ್ಥಾನಮಾನ' ನೀಡುವಂತೆ ಕೇಂದ್ರಕ್ಕೆ ಜೆಡಿಯು ಒತ್ತಾಯ; ಕಾರ್ಯಾಧ್ಯಕ್ಷರಾಗಿ ಸಂಜಯ್ ಝಾ ನೇಮಕ

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು.

ನವದೆಹಲಿ: ದೆಹಲಿಯಲ್ಲಿ ಶನಿವಾರ ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ನೀಡಬೇಕು ಎಂಬ ನಿರ್ಣಯವನ್ನು ಅಂಗೀಕರಿಸಿದೆ.

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು.

NEET-UG ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪೇಪರ್ ಸೋರಿಕೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು ಎಂಬ ಬೇಡಿಕೆಯನ್ನು ಜೆಡಿಯು ನಾಯಕರು ಮುಂದಿಟ್ಟರು.

ಬಿಹಾರಕ್ಕೆ "ವಿಶೇಷ ಸ್ಥಾನಮಾನ"ದ ಬೇಡಿಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನ ನಿರಂತರ ಬೇಡಿಕೆಯಾಗಿದ್ದು, ಬಿಹಾರ ಸಿಎಂ ಈ ವರ್ಷದ ಆರಂಭದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ(ಎನ್‌ಡಿಎ) ಸೇರಿದಾಗಿನಿಂದ ಅದು ಮತ್ತಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.

ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ನಾಯಕ ಕೆಸಿ ತ್ಯಾಗಿ, ಸಿಎಂ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಕಾರ್ಯಕಾರಿಣಿಯ ಮುಂದೆ ಜೆಡಿಯು ಯಾವಾಗಲೂ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವುದಾಗಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಸಂಜಯ್‌ ಝಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಾವು ವಿಶೇಷ ಸ್ಥಾನಮಾನ ಮತ್ತು ಆರ್ಥಿಕ ಪ್ಯಾಕೇಜ್‌ಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT