ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಬಿಹಾರಕ್ಕೆ 'ವಿಶೇಷ ಸ್ಥಾನಮಾನ' ನೀಡುವಂತೆ ಕೇಂದ್ರಕ್ಕೆ ಜೆಡಿಯು ಒತ್ತಾಯ; ಕಾರ್ಯಾಧ್ಯಕ್ಷರಾಗಿ ಸಂಜಯ್ ಝಾ ನೇಮಕ

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು.

ನವದೆಹಲಿ: ದೆಹಲಿಯಲ್ಲಿ ಶನಿವಾರ ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ನೀಡಬೇಕು ಎಂಬ ನಿರ್ಣಯವನ್ನು ಅಂಗೀಕರಿಸಿದೆ.

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು.

NEET-UG ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪೇಪರ್ ಸೋರಿಕೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು ಎಂಬ ಬೇಡಿಕೆಯನ್ನು ಜೆಡಿಯು ನಾಯಕರು ಮುಂದಿಟ್ಟರು.

ಬಿಹಾರಕ್ಕೆ "ವಿಶೇಷ ಸ್ಥಾನಮಾನ"ದ ಬೇಡಿಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನ ನಿರಂತರ ಬೇಡಿಕೆಯಾಗಿದ್ದು, ಬಿಹಾರ ಸಿಎಂ ಈ ವರ್ಷದ ಆರಂಭದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ(ಎನ್‌ಡಿಎ) ಸೇರಿದಾಗಿನಿಂದ ಅದು ಮತ್ತಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.

ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ನಾಯಕ ಕೆಸಿ ತ್ಯಾಗಿ, ಸಿಎಂ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಕಾರ್ಯಕಾರಿಣಿಯ ಮುಂದೆ ಜೆಡಿಯು ಯಾವಾಗಲೂ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವುದಾಗಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಸಂಜಯ್‌ ಝಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಾವು ವಿಶೇಷ ಸ್ಥಾನಮಾನ ಮತ್ತು ಆರ್ಥಿಕ ಪ್ಯಾಕೇಜ್‌ಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT