ಸಾಂದರ್ಭಿಕ ಚಿತ್ರ 
ದೇಶ

ಮೆಡಿಕಲ್ ಸೀಟು ಕೊಡಿಸುವುದಾಗಿ ಜನರಿಗೆ ವಂಚನೆ: ಮುಂಬೈಯಲ್ಲಿ ವಂಚಕನನ್ನು ಬಂಧಿಸಿದ ಕರ್ನಾಟಕ ಪೊಲೀಸರು!

ಬೆಳಗಾವಿ ಮೂಲದ ಆರ್ಗಂಡ ಅರವಿಂದ್ ಕುಮಾರ್ ಬಂಧಿತ ಆರೋಪಿ. ನಗರದ ಸಕಿನಾಕಾ ಪ್ರದೇಶದಲ್ಲಿನ ಅವರ ಉದ್ಯೋಗ ಮಾಹಿತಿ ಕೇಂದ್ರದಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಮುಂಬೈ: ಮೆಡಿಕಲ್ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಹಲವು ಜನರಿಗೆ ವಂಚಿಸಿದ ಆರೋಪದ ಮೇರೆಗೆ 47 ವರ್ಷದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಪೊಲೀಸರು ಮುಂಬೈಯಲ್ಲಿ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಬೆಳಗಾವಿ ಮೂಲದ ಆರ್ಗಂಡ ಅರವಿಂದ್ ಕುಮಾರ್ ಬಂಧಿತ ಆರೋಪಿ. ನಗರದ ಸಕಿನಾಕಾ ಪ್ರದೇಶದಲ್ಲಿನ ಅವರ ಉದ್ಯೋಗ ಮಾಹಿತಿ ಕೇಂದ್ರದಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ ಅವರ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಬಂಧಿಸಿರುವುದಾಗಿ ಅವರು ಹೇಳಿದರು.

ಕುಮಾರ್ ವೈದ್ಯಕೀಯ ಸೀಟು ಕೊಡಿಸುವುದಾಗಿ ದೂರುದಾರರಿಂದ ಹಣ ಪಡೆದಿದ್ದರು. ಆದರೆ ಕೆಲಸ ಕೊಡಿಸಿರಲಿಲ್ಲ. ಇದು NEET ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿಲ್ಲ. ಅವರು ಮುಂಬೈಯ ಸಕಿನಾಕಾದಲ್ಲಿ ಉದ್ಯೋಗ ಮಾಹಿತಿ ಕೇಂದ್ರ ತೆರೆದಿದ್ದು, ಅಲ್ಲಿ ಅಲ್ಲಿ ಕರ್ನಾಟಕ ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ಆರೋಪಿ ಮತ್ತಷ್ಟು ಜನರನ್ನು ವಂಚಿಸಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

NEET-UG ಪೇಪರ್ ಸೋರಿಕೆ ಪ್ರಕರಣದ ಸಿಬಿಐ ತನಿಖೆಯ ಮಧ್ಯೆ ವೈದ್ಯಕೀಯ ಕಾಲೇಜುಗಳಲ್ಲಿನ ಪ್ರವೇಶಗಳು ಗಮನ ಸೆಳೆದಿವೆ. ಸಿಬಿಐ ತನ್ನ ತನಿಖೆಗೆ ಸಂಬಂಧಿಸಿದಂತೆ ಅನೇಕ ರಾಜ್ಯಗಳಲ್ಲಿ ಆರೋಪಿಗಳ ಬಂಧನ ಕಾರ್ಯದಲ್ಲಿ ತೊಡಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel