ಸಾಂದರ್ಭಿಕ ಚಿತ್ರ 
ದೇಶ

ಮೆಡಿಕಲ್ ಸೀಟು ಕೊಡಿಸುವುದಾಗಿ ಜನರಿಗೆ ವಂಚನೆ: ಮುಂಬೈಯಲ್ಲಿ ವಂಚಕನನ್ನು ಬಂಧಿಸಿದ ಕರ್ನಾಟಕ ಪೊಲೀಸರು!

ಬೆಳಗಾವಿ ಮೂಲದ ಆರ್ಗಂಡ ಅರವಿಂದ್ ಕುಮಾರ್ ಬಂಧಿತ ಆರೋಪಿ. ನಗರದ ಸಕಿನಾಕಾ ಪ್ರದೇಶದಲ್ಲಿನ ಅವರ ಉದ್ಯೋಗ ಮಾಹಿತಿ ಕೇಂದ್ರದಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಮುಂಬೈ: ಮೆಡಿಕಲ್ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಹಲವು ಜನರಿಗೆ ವಂಚಿಸಿದ ಆರೋಪದ ಮೇರೆಗೆ 47 ವರ್ಷದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಪೊಲೀಸರು ಮುಂಬೈಯಲ್ಲಿ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಬೆಳಗಾವಿ ಮೂಲದ ಆರ್ಗಂಡ ಅರವಿಂದ್ ಕುಮಾರ್ ಬಂಧಿತ ಆರೋಪಿ. ನಗರದ ಸಕಿನಾಕಾ ಪ್ರದೇಶದಲ್ಲಿನ ಅವರ ಉದ್ಯೋಗ ಮಾಹಿತಿ ಕೇಂದ್ರದಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ ಅವರ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಬಂಧಿಸಿರುವುದಾಗಿ ಅವರು ಹೇಳಿದರು.

ಕುಮಾರ್ ವೈದ್ಯಕೀಯ ಸೀಟು ಕೊಡಿಸುವುದಾಗಿ ದೂರುದಾರರಿಂದ ಹಣ ಪಡೆದಿದ್ದರು. ಆದರೆ ಕೆಲಸ ಕೊಡಿಸಿರಲಿಲ್ಲ. ಇದು NEET ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿಲ್ಲ. ಅವರು ಮುಂಬೈಯ ಸಕಿನಾಕಾದಲ್ಲಿ ಉದ್ಯೋಗ ಮಾಹಿತಿ ಕೇಂದ್ರ ತೆರೆದಿದ್ದು, ಅಲ್ಲಿ ಅಲ್ಲಿ ಕರ್ನಾಟಕ ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ಆರೋಪಿ ಮತ್ತಷ್ಟು ಜನರನ್ನು ವಂಚಿಸಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

NEET-UG ಪೇಪರ್ ಸೋರಿಕೆ ಪ್ರಕರಣದ ಸಿಬಿಐ ತನಿಖೆಯ ಮಧ್ಯೆ ವೈದ್ಯಕೀಯ ಕಾಲೇಜುಗಳಲ್ಲಿನ ಪ್ರವೇಶಗಳು ಗಮನ ಸೆಳೆದಿವೆ. ಸಿಬಿಐ ತನ್ನ ತನಿಖೆಗೆ ಸಂಬಂಧಿಸಿದಂತೆ ಅನೇಕ ರಾಜ್ಯಗಳಲ್ಲಿ ಆರೋಪಿಗಳ ಬಂಧನ ಕಾರ್ಯದಲ್ಲಿ ತೊಡಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT