ಶರದ್ ಪವಾರ್-ಉದ್ದವ್ ಠಾಕ್ರೆ TNIE
ದೇಶ

ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆ MVA ಕೂಟದ ಮುಖ್ಯಮಂತ್ರಿಯಾಗಿ ಅಭ್ಯರ್ಥಿ? 'ಇಲ್ಲ' ಎಂದ ಶರದ್ ಪವಾರ್

ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಎಂವಿಎ ಮುಖ್ಯಮಂತ್ರಿಯಾಗಿ ಸ್ವೀಕರಿಸಲು ನಿರಾಕರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎಂವಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಅದರ ಮುಖ್ಯಮಂತ್ರಿ ಯಾರು? ಈ ಪ್ರಶ್ನೆಗೆ ಎಂವಿಎ ನಾಯಕರಿಂದ ಅಥವಾ ಅವರ ಪಕ್ಷಗಳಿಂದ ಇನ್ನೂ ಉತ್ತರ ಸಿಕ್ಕಿಲ್ಲ. ಇದು ಮಹಾರಾಷ್ಟ್ರದ ಜನರೂ ತಿಳಿದುಕೊಳ್ಳಲು ಬಯಸುವ ಪ್ರಶ್ನೆ. ಆದರೆ, ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಎಂವಿಎ ಮುಖ್ಯಮಂತ್ರಿಯಾಗಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಶರದ್ ಪವಾರ್ ಅವರ ಈ ಹೇಳಿಕೆಯ ನಂತರ ರಾಜಕೀಯ ವಲಯದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿವೆ, MVA ಕೂಟ ವಿಭಜನೆಯಾಗುತ್ತದೆಯೇ?

ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಮುಖ್ಯಮಂತ್ರಿಯಾಗಿ ಬಿಂಬಿಸಬೇಕೆಂದು ಶಿವಸೇನೆ (ಉದ್ಧವ್ ಬಣ) ಒತ್ತಾಯಿಸುತ್ತಿದ್ದರೆ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಈ ನಿರ್ಧಾರವನ್ನು ತಿರಸ್ಕರಿಸಿದ್ದಾರೆ.

ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಠಾಕ್ರೆ ಅವರನ್ನು MVAಯ ಮುಖ್ಯಮಂತ್ರಿ ಮುಖ ಎಂದು ಬಿಂಬಿಸಬೇಕು ಎಂದು ಒತ್ತಾಯಿಸಿದ್ದರು. ಈ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶರದ್ ಪವಾರ್, ನಮ್ಮ ಮೈತ್ರಿ ನಮ್ಮ ಸಾಮೂಹಿಕ ಮುಖವಾಗಿದೆ. ಒಬ್ಬ ವ್ಯಕ್ತಿ ನಮ್ಮ ಕೂಟದ ಮುಖ್ಯಮಂತ್ರಿ ಹುದ್ದೆಯ ಮುಖವಾಗಲು ಸಾಧ್ಯವಿಲ್ಲ. ಸಾಮೂಹಿಕ ನಾಯಕತ್ವವೇ ನಮ್ಮ ಸೂತ್ರ. ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು, 'ಮೂರೂ ಮೈತ್ರಿ ಪಾಲುದಾರರು ಒಟ್ಟಾಗಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ' ಎಂದು ಹೇಳಿದರು.

ಎಂವಿಎಯಲ್ಲಿ ಎಲ್ಲಾ ಎಡ ಪಕ್ಷಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ವಿರೋಧಿಸುವವರನ್ನು ಸೇರಿಸಿಕೊಳ್ಳುವಂತೆ ಕರೆ ನೀಡಿದ ಪವಾರ್, ಇತ್ತೀಚಿನ ಲೋಕಸಭಾ ಚುನಾವಣೆಯ ಸಮಯದಲ್ಲಿ, PWP (ಭಾರತೀಯ ರೈತರು ಮತ್ತು ಕಾರ್ಮಿಕರ ಪಕ್ಷ), AAP ಮತ್ತು ಕಮ್ಯುನಿಸ್ಟ್ ಪಕ್ಷಗಳು ನಮಗೆ ಸಹಾಯ ಮಾಡಿದವು. ನಾವು ಎಂವಿಎಯಲ್ಲಿ ಮೂವರು ಪಾಲುದಾರರಾಗಿದ್ದರೂ, ಈ ಎಲ್ಲಾ ಪಕ್ಷಗಳನ್ನು ನಾವು ಸೇರಿಸಿಕೊಳ್ಳಬೇಕು. ಮೋದಿಯನ್ನು ವಿರೋಧಿಸುವವರೆಲ್ಲ ಎಂವಿಎ ಭಾಗವಾಗಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದ್ದರೂ ಅದನ್ನು ಚರ್ಚೆಯ ಮೂಲಕ ಮತ್ತು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ನಂತರ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT