ಶರದ್ ಪವಾರ್-ಉದ್ದವ್ ಠಾಕ್ರೆ TNIE
ದೇಶ

ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆ MVA ಕೂಟದ ಮುಖ್ಯಮಂತ್ರಿಯಾಗಿ ಅಭ್ಯರ್ಥಿ? 'ಇಲ್ಲ' ಎಂದ ಶರದ್ ಪವಾರ್

ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಎಂವಿಎ ಮುಖ್ಯಮಂತ್ರಿಯಾಗಿ ಸ್ವೀಕರಿಸಲು ನಿರಾಕರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎಂವಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಅದರ ಮುಖ್ಯಮಂತ್ರಿ ಯಾರು? ಈ ಪ್ರಶ್ನೆಗೆ ಎಂವಿಎ ನಾಯಕರಿಂದ ಅಥವಾ ಅವರ ಪಕ್ಷಗಳಿಂದ ಇನ್ನೂ ಉತ್ತರ ಸಿಕ್ಕಿಲ್ಲ. ಇದು ಮಹಾರಾಷ್ಟ್ರದ ಜನರೂ ತಿಳಿದುಕೊಳ್ಳಲು ಬಯಸುವ ಪ್ರಶ್ನೆ. ಆದರೆ, ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಎಂವಿಎ ಮುಖ್ಯಮಂತ್ರಿಯಾಗಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಶರದ್ ಪವಾರ್ ಅವರ ಈ ಹೇಳಿಕೆಯ ನಂತರ ರಾಜಕೀಯ ವಲಯದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿವೆ, MVA ಕೂಟ ವಿಭಜನೆಯಾಗುತ್ತದೆಯೇ?

ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಮುಖ್ಯಮಂತ್ರಿಯಾಗಿ ಬಿಂಬಿಸಬೇಕೆಂದು ಶಿವಸೇನೆ (ಉದ್ಧವ್ ಬಣ) ಒತ್ತಾಯಿಸುತ್ತಿದ್ದರೆ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಈ ನಿರ್ಧಾರವನ್ನು ತಿರಸ್ಕರಿಸಿದ್ದಾರೆ.

ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಠಾಕ್ರೆ ಅವರನ್ನು MVAಯ ಮುಖ್ಯಮಂತ್ರಿ ಮುಖ ಎಂದು ಬಿಂಬಿಸಬೇಕು ಎಂದು ಒತ್ತಾಯಿಸಿದ್ದರು. ಈ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶರದ್ ಪವಾರ್, ನಮ್ಮ ಮೈತ್ರಿ ನಮ್ಮ ಸಾಮೂಹಿಕ ಮುಖವಾಗಿದೆ. ಒಬ್ಬ ವ್ಯಕ್ತಿ ನಮ್ಮ ಕೂಟದ ಮುಖ್ಯಮಂತ್ರಿ ಹುದ್ದೆಯ ಮುಖವಾಗಲು ಸಾಧ್ಯವಿಲ್ಲ. ಸಾಮೂಹಿಕ ನಾಯಕತ್ವವೇ ನಮ್ಮ ಸೂತ್ರ. ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು, 'ಮೂರೂ ಮೈತ್ರಿ ಪಾಲುದಾರರು ಒಟ್ಟಾಗಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ' ಎಂದು ಹೇಳಿದರು.

ಎಂವಿಎಯಲ್ಲಿ ಎಲ್ಲಾ ಎಡ ಪಕ್ಷಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ವಿರೋಧಿಸುವವರನ್ನು ಸೇರಿಸಿಕೊಳ್ಳುವಂತೆ ಕರೆ ನೀಡಿದ ಪವಾರ್, ಇತ್ತೀಚಿನ ಲೋಕಸಭಾ ಚುನಾವಣೆಯ ಸಮಯದಲ್ಲಿ, PWP (ಭಾರತೀಯ ರೈತರು ಮತ್ತು ಕಾರ್ಮಿಕರ ಪಕ್ಷ), AAP ಮತ್ತು ಕಮ್ಯುನಿಸ್ಟ್ ಪಕ್ಷಗಳು ನಮಗೆ ಸಹಾಯ ಮಾಡಿದವು. ನಾವು ಎಂವಿಎಯಲ್ಲಿ ಮೂವರು ಪಾಲುದಾರರಾಗಿದ್ದರೂ, ಈ ಎಲ್ಲಾ ಪಕ್ಷಗಳನ್ನು ನಾವು ಸೇರಿಸಿಕೊಳ್ಳಬೇಕು. ಮೋದಿಯನ್ನು ವಿರೋಧಿಸುವವರೆಲ್ಲ ಎಂವಿಎ ಭಾಗವಾಗಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದ್ದರೂ ಅದನ್ನು ಚರ್ಚೆಯ ಮೂಲಕ ಮತ್ತು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ನಂತರ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT