ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: ಗಿರಿದಿಹ್ ನಲ್ಲಿ ಭಾರಿ ಮಳೆಗೆ ನಿರ್ಮಾಣ ಹಂತದ ಸೇತುವೆ ಕುಸಿತ

ಗಿರಿದಿಹ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಅರ್ಗಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಆದರೆ, ಯಾವುದೇ ಪ್ರಾಣ ಹಾನಿ, ಗಾಯ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ರಾಂಚಿ: ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರ್ಮಾಣ ಹಂತದ ಸೇತುವೆಗಳ ಕುಸಿತ ಪ್ರಕರಣಗಳು ಮುಂದುವರೆದಿದೆ. ಬಿಹಾರದಲ್ಲಿ ಇತ್ತೀಚಿಗೆ ನಾಲ್ಕು ನಿರ್ಮಾಣ ಹಂತದ ಸೇತುವೆ ಕುಸಿತ ಪ್ರಕರಣ ವರದಿಯಾಗಿತ್ತು. ಇದೀಗ ಜಾರ್ಖಂಡ್ ನ ಗಿರಿದಿಹ್ ನಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ.

ಗಿರಿದಿಹ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಅರ್ಗಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಆದರೆ, ಯಾವುದೇ ಪ್ರಾಣ ಹಾನಿ, ಗಾಯ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ 235 ಕಿಮೀ ದೂರದಲ್ಲಿರುವ ದಿಯೋರಿ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ.

ಡುಮೃತೋಲಾ ಮತ್ತು ಕರಿಪಾಹ್ರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಫತೇಪುರ್-ಭೆಲ್ವಾಗತಿ ರಸ್ತೆಯಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗುತ್ತಿದ್ದು, ಭಾರಿ ಮಳೆಗೆ ಸೇತುವೆಯ ಫಿಲ್ಲರ್ ಕುಸಿದಿದ್ದು, ಮರು ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಗಿರಿದಿಹ್ ಕಾರ್ಯಪಾಲಕ ಅಭಿಯಂತರ ವಿನಯ್ ಕುಮಾರ್ ತಿಳಿಸಿದ್ದಾರೆ.

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದ್ದು, ಜಾರ್ಖಂಡ್‌ನ ಗಿರಿದಿಹ್ ಮತ್ತು ಬಿಹಾರದ ಜಮುಯಿ ಜಿಲ್ಲೆಯ ದೂರದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟನ್ ರೈಲಿನಲ್ಲಿ ದುಷ್ಕರ್ಮಿಗಳಿಂದ ಸಾಮೂಹಿಕ ಇರಿತ: 9 ಜನರ ಸ್ಥಿತಿ ಗಂಭೀರ, ಇಬ್ಬರು ಶಂಕಿತರ ಬಂಧನ

ಭಾರೀ ಮಳೆಯಿಂದಾಗಿ ಟಾಸ್ ರದ್ದಾದ ಕಾರಣ ಭಾರತ-ಆಫ್ರಿಕಾ ಫೈನಲ್ ವಿಳಂಬ: ಇಂದು ಯಾರೇ ಗೆದ್ದರೂ ಇತಿಹಾಸ ಸೃಷ್ಟಿ!

3ನೇ ಟಿ20: ಭಾರತಕ್ಕೆ ಗೆಲ್ಲಲು 187 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

Cricket: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಶ್ವದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಆಜಂ!

INDIA vs AUSTRALIA, 3rd T20I: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಸಂಜು ಸ್ಯಾಮ್ಸನ್ ಸೇರಿ ಮೂವರಿಗೆ ಕೊಕ್

SCROLL FOR NEXT