ವೆಂಕಯ್ಯ ನಾಯ್ಡು 
ದೇಶ

ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಜೀವನಯಾನದ ಮೂರು ಕೃತಿ: ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮಾಜಿ ಉಪರಾಷ್ಟ್ರಪತಿ ನಾಯ್ಡು ಅವರ 75 ನೇ ಜನ್ಮದಿನದ ಮುನ್ನಾ ದಿನದಂದು ತೆಲಂಗಾಣದ ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಅನ್ವಯ ಕನ್ವೆನ್ಷನ್ ಸೆಂಟರ್‌ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಜೀವನಯಾನ ಕುರಿತಾದ ಮೂರು ಪುಸ್ತಕಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಮಾಜಿ ಉಪರಾಷ್ಟ್ರಪತಿ ನಾಯ್ಡು ಅವರ 75 ನೇ ಜನ್ಮದಿನದ ಮುನ್ನಾ ದಿನದಂದು ತೆಲಂಗಾಣದ ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಅನ್ವಯ ಕನ್ವೆನ್ಷನ್ ಸೆಂಟರ್‌ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ತಮ್ಮ ವರ್ಚುವಲ್ ಭಾಷಣದಲ್ಲಿ ಮಾಜಿ ಉಪರಾಷ್ಟ್ರಪತಿಯನ್ನು ಶ್ಲಾಘಿಸಿದ ಮೋದಿ, "ನಾಳೆ, ಜುಲೈ 1, ವೆಂಕಯ್ಯ ನಾಯ್ಡು ಅವರ ಜನ್ಮದಿನ. ಅವರ ಜೀವನ ಪಯಣ 75 ವರ್ಷಗಳನ್ನು ಪೂರೈಸಿದೆ. ಈ 75 ವರ್ಷಗಳು ಅಸಾಮಾನ್ಯ ಸಾಧನೆಗಳಿಂದ ತುಂಬಿವೆ. ಈ 75 ವರ್ಷಗಳನ್ನು ಅದ್ಭುತ ಮೈಲಿಗಲ್ಲುಗಳ ಮೂಲಕ ಗುರುತಿಸಲಾಗಿದೆ. ನಾನು ಇಂದು ಅವರ ಜೀವನ ಚರಿತ್ರೆ, ಮತ್ತೆರಡು ಪುಸ್ತಕಗಳನ್ನು ಬಿಡುಗಡೆ ಮಾಡುವ ಅವಕಾಶ ಪಡೆದಿದ್ದೇನೆ. ಈ ಪುಸ್ತಕಗಳು ಜನರನ್ನು ಪ್ರೇರೇಪಿಸುತ್ತವೆ ಮತ್ತು ಅವರಿಗೆ ರಾಷ್ಟ್ರೀಯ ಸೇವೆಯ ಸರಿಯಾದ ದಿಕ್ಕನ್ನು ತೋರಿಸುತ್ತವೆ ಎಂದು ನಾನು ನಂಬುತ್ತೇನೆ ಎಂದು ಹೇಳಿದರು.

ವೆಂಕಯ್ಯ ನಾಯ್ಡು ಅವರ ಜತೆ ಬಹಳ ದೀರ್ಘ ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ, ಸರ್ಕಾರದಲ್ಲಿ ಸಂಪುಟದ ಹಿರಿಯ ಸಹೋದ್ಯೋಗಿಯಾಗಿದ್ದಾಗ, ದೇಶದ ಉಪರಾಷ್ಟ್ರಪತಿ ಹಾಗೂ ರಾಜ್ಯ ಸಭಾಪತಿಯಾಗಿದ್ದಾಗ ಅವರೊಂದಿಗೆ ಕೆಲಸ ಮಾಡಿರುವುದಾಗಿ ಮೋದಿ ತಿಳಿಸಿದ್ದಾರೆ.

ದಿ ಹಿಂದೂ, ಹೈದರಾಬಾದ್ ಆವೃತ್ತಿಯ ಮಾಜಿ ಸ್ಥಾನಿಕ ಸಂಪಾದಕ ಎಸ್ ನಾಗೇಶ್ ಕುಮಾರ್ ಬರೆದಿರುವ ವೆಂಕಯ್ಯ ನಾಯ್ಡು - ಲೈಫ್ ಇನ್ ಸರ್ವಿಸ್ (ಜೀವನ ಚರಿತ್ರೆ), ಸೆಲೆಬ್ರೇಟಿಂಗ್ ಭಾರತ್ ( ಫೋಟೋ ಕ್ರಾನಿಕಲ್) ಮತ್ತು ಸಂಜಯ್ ಕಿಶೋರ್ ಬರೆದಿರುವ ಮಹಾನೇತಾ (ಲೈಫ್ ಅಂಡ್ ಜರ್ನಿ ಆಫ್ ಎಂ ವೆಂಕಯ್ಯ ನಾಯ್ಡು ) ಮೋದಿ ಅವರು ಇಂದು ಬಿಡುಗಡೆ ಮಾಡಿದ ಕೃತಿಗಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT