ಕಾಂಗ್ರೆಸ್ ಸಭೆ 
ದೇಶ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಲು ಮುಂದಿನ ವಾರ ಸಿಡಬ್ಲ್ಯುಸಿ ಸಭೆ

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ನ ಸಿಡಬ್ಲ್ಯುಸಿ ಹಾಗೂ ಸಿಇಸಿ ಸಭೆಗಳು ಮುಂದಿನ ವಾರ ನಡೆಯಲಿದೆ.

ನವದೆಹಲಿ: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ನ ಸಿಡಬ್ಲ್ಯುಸಿ ಹಾಗೂ ಸಿಇಸಿ ಸಭೆಗಳು ಮುಂದಿನ ವಾರ ನಡೆಯಲಿದೆ. ಅಭ್ಯರ್ಥಿಗಳ ಪಟ್ಟಿಯ ಜೊತೆ ಜೊತೆಗೇ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.

ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿಯ ಸಭೆಯು ಅಭ್ಯರ್ಥಿಗಳ ಪಟ್ಟಿ ಮತ್ತು ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸ್ಕ್ರೀನಿಂಗ್ ಕಮಿಟಿಗಳು ಕೆಲವನ್ನು ಹೊರತುಪಡಿಸಿ ಬಹುತೇಕ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಸ್ಕ್ರೀನಿಂಗ್ ಸಮಿತಿಗಳು ಸಿದ್ಧಪಡಿಸಿದ ಅಭ್ಯರ್ಥಿಗಳ ಸಮಿತಿಯನ್ನು ಸಿಇಸಿ ಚರ್ಚಿಸುತ್ತದೆ ಮತ್ತು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಸಮಿತಿ ಬಹುತೇಕ ಎಲ್ಲಾ ಈಶಾನ್ಯ ರಾಜ್ಯಗಳು, ಕೇರಳ, ಮಧ್ಯಪ್ರದೇಶ ಮತ್ತು ಗೋವಾ ಸೇರಿದಂತೆ ಸುಮಾರು 100 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿರ್ಧರಿಸುವ ಸಾಧ್ಯತೆಯಿದೆ.

ಗೆಹ್ಲೋಟ್, ಪೈಲಟ್ ಕಣದಿಂದ ಹೊರಕ್ಕೆ?

ಕಾಂಗ್ರೆಸ್ ಸಿಇಸಿ ಸಭೆಯು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ಅವರಂತಹ ಉನ್ನತ ನಾಯಕರ ಉಮೇದುವಾರಿಕೆಯನ್ನು ನಿರ್ಧರಿಸುವ ಸಾಧ್ಯತೆಯಿದೆ. ರಾಜಸ್ಥಾನದ ನಾಯಕರಾದ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಚುನಾವಣೆ ಸ್ಪರ್ಧೆಯಿಂದ ದೂರ ಉಳಿಯುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!