ನಿತಿನ್ ಗಡ್ಕರಿ 
ದೇಶ

ಎಕ್ಸ್ ನಲ್ಲಿ ಅವಹೇಳನಕಾರಿ ಸುದ್ದಿ: ಖರ್ಗೆ, ಜೈರಾಮ್ ರಮೇಶ್ ಗೆ ನೋಟಿಸ್ ಕಳುಹಿಸಿದ ಗಡ್ಕರಿ

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಬಗ್ಗೆ ತಪ್ಪು ದಾರಿಯ ಮತ್ತು ಅವಹೇಳನಕಾರಿ ಸುದ್ದಿಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಶುಕ್ರವಾರ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ನವದೆಹಲಿ: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಬಗ್ಗೆ ತಪ್ಪು ದಾರಿಯ ಮತ್ತು ಅವಹೇಳನಕಾರಿ ಸುದ್ದಿಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಶುಕ್ರವಾರ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಕಾಂಗ್ರೆಸ್‌ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಡಲಾದ ಫೋಸ್ಟ್ ಮತ್ತು ವಿಷಯಗಳನ್ನು ನೋಡಿದ ತಮ್ಮ ಕಕ್ಷಿದಾರರಿಗೆ ಆಘಾತವಾಗಿದೆ ಎಂದು ಗಡ್ಕರಿ ಅವರ ವಕೀಲ ಬಲೇಂದು ಶೇಖರ್ ಹೇಳಿದ್ದಾರೆ.

ಖರ್ಗೆ ಮತ್ತು ರಮೇಶ್ ಅವರು ಉದ್ದೇಶಪೂರ್ವಕವಾಗಿ ಗಡ್ಕರಿಯವರ "ದಿ ಲಲ್ಲಾಂಟಾಪ್" ವೆಬ್ ಪೋರ್ಟಲ್‌ಗೆ ನೀಡಿದ ಸಂದರ್ಶನದ 19 ಸೆಕೆಂಡುಗಳ ವೀಡಿಯೊ ತುಣುಕನ್ನು ಪೋಸ್ಟ್ ಮಾಡಿದ್ದಾರೆ, ಅವರ ಪದಗಳ ಸಂದರ್ಭೋಚಿತ ಉದ್ದೇಶ ಮತ್ತು ಅರ್ಥವನ್ನು ಮರೆಮಾಚಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ. ಸಾರ್ವಜನಿಕರ ದೃಷ್ಟಿಯಲ್ಲಿ ಗಡ್ಕರಿ ಅರ ಬಗ್ಗೆ ಅಪಖ್ಯಾತಿ ಸೃಷ್ಟಿಸುವ ಏಕೈಕ ಉದ್ದೇಶ ಮತ್ತು ದುರುದ್ದೇಶದಿಂದ ಈ ಕೆಟ್ಟ ಕೃತ್ಯ ಎಸಗಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜನರ ವಿಶ್ವಾಸ ಗಳಿಸಲು ಸಜ್ಜಾಗಿರುವ ಬಿಜೆಪಿ ಒಗ್ಗಟ್ಟಿನಲ್ಲಿ ಬಿರುಕು ಮೂಡಿಸುವ ವ್ಯರ್ಥ ಪ್ರಯತ್ನವೂ ಆಗಿದೆ.

ಗಡ್ಕರಿ ಅವರ ಸಂದರ್ಶನವನ್ನು ತಿರುಚಿ, ಸಂದರ್ಭೋಚಿತ ಅರ್ಥವಿಲ್ಲದ ವೀಡಿಯೊವನ್ನು ಅಪ್‌ಲೋಡ್ ಮಾಡುವ ಮೂಲಕ ಪ್ರಸ್ತುತಪಡಿಸಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT