ಸಾಂದರ್ಭಿಕ ಚಿತ್ರ 
ದೇಶ

ಥಾಣೆ: ಧಾರ್ಮಿಕ ಕ್ರಿಯೆಗಳ ನೆಪದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಸ್ವಯಂಘೋಷಿತ ದೇವಮಾನವನ ಬಂಧನ

ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಥಾಣೆ: ಶ್ರೀಮಂತರಾಗಲು ಬಯಸುವ ಜನರಿಗೆ ಧಾರ್ಮಿಕ ಕ್ರಿಯೆಗಳನ್ನು ನಡೆಸುವ ನೆಪದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಥಾಣೆ ಅಪರಾಧ ವಿಭಾಗದ ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಬೋಡಿಯಿಂದ 15 ವರ್ಷದ ಬಾಲಕಿ ನಾಪತ್ತೆಯಾದ ನಂತರ ದಾಖಲಾದ ಅಪಹರಣ ಪ್ರಕರಣದ ತನಿಖೆಯ ವೇಳೆ ಈ ಸೆಕ್ಸ್ ದಂಧೆ ಬಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ವೇಳೆ ಫೆಬ್ರವರಿ 25 ರಂದು ಅಸ್ಲಂ ಖಾನ್ ಮತ್ತು ಸಲೀಂ ಶೇಖ್ ಎಂದು ಗುರುತಿಸಲಾದ ಇಬ್ಬರನ್ನು ಬಂಧಿಸಲಾಗಿತ್ತು. ಕೆಲ ಸಮಯದ ನಂತರ ಆರೋಪಿಗಳ ನೀಡಿದ ಮಾಹಿತಿ ಆಧರಿಸಿ ಪ್ರಮುಖ ಆರೋಪಿ ಸಾಹೇಬ್ ಲಾಲ್ ವಜೀರ್ ಶೇಖ್ ಅಲಿಯಾಸ್ ಯೂಸುಫ್ ಬಾಬಾ ನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ಯೂಸುಫ್ ಬಾಬಾ ಮತ್ತು ಆತನ ಸಹಚರರು ಮಾಟಮಂತ್ರದ ಮೂಲಕ ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರಿಗೆ ಶ್ರೀಮಂತರನ್ನಾಗಿ ಮಾಡುವ ಭರವಸೆ ನೀಡಿ, ಸೆಕ್ಸ್ ದಂಧಗೆ ಬಳಸಿಕೊಳ್ಳಲಾಗಿದೆ ಎಂದು ನಮ್ಮ ತನಿಖೆಯಿಂದ ತಿಳಿದು ಬಂದಿದೆ. ಕೆಲವು ಧಾರ್ಮಿಕ ಆಚರಣೆಗಳಲ್ಲಿ ಮಹಿಳೆಯರು ನಗ್ನವಾಗಿ ಭಾಗವಹಿಸಬೇಕು ಎಂದು ಹೇಳಲಾಗಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳ ಮೊಬೈಲ್ ಫೋನ್‌ಗಳಿಂದ ಈ ಆಚರಣೆಗಳ ಹಲವಾರು ಆಕ್ಷೇಪಾರ್ಹ ವೀಡಿಯೊಗಳು ಮತ್ತು ಇತರ ದೋಷಾರೋಪಣೆಯ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.

"ಇಬ್ಬರು ಮಹಿಳೆಯರನ್ನು ಒಳಗೊಂಡಿರುವ ಈ ಗ್ಯಾಂಗ್ ಕನಿಷ್ಠ 17 ಜನರನ್ನು ಬಲೆಗೆ ಬೀಳಿಸಿದೆ. ಥಾಣೆ, ಪಾಲ್ಘರ್‌ನ ವಸಾಯಿ ಮತ್ತು ನೆರೆಯ ಮುಂಬೈನಿಂದ ಏಳು ಮಂದಿಯನ್ನು ಬಂಧಿಸಲಾಗಿದೆ" ಎಂದು ಥಾಣೆ ಕ್ರೈಂ ಬ್ರಾಂಚ್ ಘಟಕದ ಇನ್ಸ್‌ಪೆಕ್ಟರ್ ಕೃಷ್ಣ ಕೊಕ್ನಿ ಅವರು ತಿಳಿಸಿದ್ದಾರೆ.

ಈ ಸಂಬಂಧ ರಬೋಡಿ ಪೊಲೀಸ್ ಠಾಣೆಯಲ್ಲಿ ಅಪಹರಣ, ಅತ್ಯಾಚಾರ, ವಂಚನೆ ಮತ್ತು ಐಪಿಸಿ ಇತರ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ದಂಧೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT