ಸಾಂದರ್ಭಿಕ ಚಿತ್ರ 
ದೇಶ

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಕೇಂದ್ರ ಸಚಿವ ಶಾಂತನು ಠಾಕೂರ್

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ಸೋಮವಾರ ಪುನರುಚ್ಚರಿಸಿದ್ದಾರೆ.

ನವದೆಹಲಿ: 2019 ರ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಲೋಕಸಭೆ ಚುನಾವಣೆಗೂ ಮುನ್ನ ಜಾರಿಗೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ಸೋಮವಾರ ಪುನರುಚ್ಚರಿಸಿದ್ದಾರೆ.

ಅಮಿತ್ ಶಾ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಂತನು ಠಾಕೂರ್ ಅವರು, "ಇದು ಅತ್ಯಂತ ಅಗತ್ಯವಾದ ಸಾಂವಿಧಾನಿಕ ಪ್ರಕ್ರಿಯೆಯಾಗಿದೆ ಮತ್ತು ಅದನ್ನು ಕಾರ್ಯಗತಗೊಳಿಸುವುದು ನಮಗೆ ಮುಖ್ಯವಾಗಿದೆ ಎಂದು ಅವರು ವಿವರಿಸಿದರು.

ನಾವು ಗಡಿಯಾಚೆಯಿಂದ ಬರುವ ಜನರಿಗೆ ಆಶ್ರಯ ನೀಡಬೇಕು ಮತ್ತು ಅವರು ಇಲ್ಲಿಯೇ ಉಳಿದುಕೊಳ್ಳಬೇಕು. ಸಿಎಎ ಪ್ರಸ್ತುತ ಇರುವ ನಾಗರಿಕರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಸಿಎಎ ಅನ್ನು ರಾಜ್ಯ ಸರ್ಕಾರಗಳ ಯಾವುದೇ ಪಾತ್ರವಿಲ್ಲದ ರೀತಿಯಲ್ಲಿ ಜಾರಿಗೊಳಿಸಲಾಗುವುದು. ದೇಶದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿಸಲು ಅವರಿಗೆ ಯಾವುದೇ ಅವಕಾಶ ಸಿಗುವುದಿಲ್ಲ" ಎಂದು ಠಾಕೂರ್ ಅವರು ಎಎನ್‌ಐಗೆ ತಿಳಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ಅಮಿತ್ ಶಾ ಅವರು ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಅಧಿಸೂಚನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT