ಬಿಜೆಪಿ ಸಂಸದ ಉಪೇಂದ್ರ ಸಿಂಗ್ 
ದೇಶ

ಲೋಕಸಭೆ ಟಿಕೆಟ್ ಪಡೆದ ಮರುದಿನವೇ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ಅವರ ತಿರುಚಿದ ಅಶ್ಲೀಲ ವಿಡಿಯೋ ವೈರಲ್!

ಬಾರಾಬಂಕಿ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಬಾರಾಬಂಕಿ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಂಸದರ ಆಪ್ತ ಕಾರ್ಯದರ್ಶಿ ದಿನೇಶ್ ಚಂದ್ರ ರಾವತ್ ಅವರ ದೂರಿನ ಮೇರೆಗೆ ಅಪರಿಚಿತ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಆದಿತ್ಯ ತ್ರಿಪಾಠಿ ತಿಳಿಸಿದ್ದಾರೆ.

ಮುಂಬಲಿರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಉಪೇಂದ್ರ ಸಿಂಗ್ ರಾವತ್ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ‌ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಸಂಸದರ ವರ್ಚಸ್ಸನ್ನು ಹಾಳು ಮಾಡಲು ಕೆಲವರು ಅವರ ಆಕ್ಷೇಪಾರ್ಹ ವಿಡಿಯೊವನ್ನು ಹರಿಬಿಟ್ಟಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಪುರುಷನೊಬ್ಬ ಮಹಿಳೆಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವಿಡಿಯೊದಲ್ಲಿರುವ ವ್ಯಕ್ತಿ ಉಪೇಂದ್ರ ಸಿಂಗ್ ರಾವತ್ ಎಂದು ಹೇಳಲಾಗುತ್ತಿದೆ.

ನಾನು ಬಾರಾಬಂಕಿಯಿಂದ ಪಕ್ಷದ ಟಿಕೆಟ್ ಪಡೆದ ತಕ್ಷಣ, ನನ್ನ ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂದು ರಾವತ್ ಆರೋಪಿಸಿದ್ದಾರೆ. ಅಲ್ಲದೇ ಇದು ಸಂಪೂರ್ಣವಾಗಿ ತಿರುಚಿದ ವಿಡಿಯೊ ಎಂದು ಅವರು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿಯು ಆಗಿನ ಹಾಲಿ ಸಂಸದ ಪ್ರಿಯಾಂಕಾ ಸಿಂಗ್ ರಾವತ್‌ಗೆ ಟಿಕೆಟ್ ನಿರಾಕರಿಸಿ ಉಪೇಂದ್ರ ಸಿಂಗ್ ರಾವತ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT