ಎಂ ಕೆ ಸ್ಟಾಲಿನ್(ಸಂಗ್ರಹ ಚಿತ್ರ) 
ದೇಶ

'ಸನಾತನ ಧರ್ಮ ನಿರ್ಮೂಲನೆ'ಗೆ ಉದಯನಿಧಿ ಸ್ಟಾಲಿನ್ ಕರೆ: ಸುಪ್ರೀಂ ಕೋರ್ಟ್ ಛೀಮಾರಿ

ಸನಾತನ ಧರ್ಮವನ್ನು ವಿರೋಧಿಸುವುದು ಮಾತ್ರವಲ್ಲ ಅದನ್ನು "ನಿರ್ಮೂಲನೆ" ಮಾಡಬೇಕು ಎಂದು ಸ್ಟಾಲಿನ್ ಕರೆ ನೀಡಿದ್ದರು.

ನವದೆಹಲಿ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ 'ಸನಾತನ ಧರ್ಮ ನಿರ್ಮೂಲನೆ' ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಛೀಮಾರಿ ಹಾಕಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗಪಡಿಸಿಕೊಂಡ ನಂತರ ಸುಪ್ರೀಂ ಕೋರ್ಟ್‌ಗೆ ಏಕೆ ಅರ್ಜಿ ಸಲ್ಲಿಸಿದ್ದೀರಿ ಎಂದು ಸ್ಟಾಲಿನ್ ಅವರನ್ನು ಪ್ರಶ್ನೆ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಸ್ಟಾಲಿನ್‌ಗೆ ಅವರು ಸಚಿವರಾಗಿದ್ದು, ಅವರ ಹೇಳಿಕೆಯ ಪರಿಣಾಮಗಳನ್ನು ತಿಳಿದುಕೊಳ್ಳಬೇಕು ಎಂದು ತೀಕ್ಷ್ಮವಾಗಿ ತಿಳಿಸಿದ್ದಾರೆ.

"ನೀವು ಸಂವಿಧಾನದ ಅನುಚ್ಛೇದ 19(1)(ಎ) ಅಡಿಯಲ್ಲಿ ಮತ್ತು ಆರ್ಟಿಕಲ್ 25 ರ ಅಡಿಯಲ್ಲಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ. ಈಗ ನೀವು ಆರ್ಟಿಕಲ್ 32 ರ ಅಡಿಯಲ್ಲಿ (ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು) ನಿಮ್ಮ ಹಕ್ಕನ್ನು ಚಲಾಯಿಸುತ್ತಿದ್ದೀರಾ? ನೀವು ಹೇಳಿದ್ದರ ಪರಿಣಾಮ ಎಷ್ಟರ ಮಟ್ಟಿಗಿದೆ ಎಂದು ಯೋಚಿಸಿದ್ದೀರಾ, ನೀವು ಸಾಮಾನ್ಯ ವ್ಯಕ್ತಿಯಲ್ಲ, ನೀವು ರಾಜ್ಯದ ಮಂತ್ರಿಯಾಗಿದ್ದೀರಿ, ಅದರ ಪರಿಣಾಮಗಳನ್ನು ನೀವೇ ತಿಳಿದುಕೊಳ್ಳಬೇಕು ಎಂದು ಛೀಮಾರಿ ಹಾಕಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮಾರ್ಚ್ 15ಕ್ಕೆ ಮುಂದೂಡಿದೆ.

ಉದಯನಿಧಿ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಅವರ ಪುತ್ರ.

ಸೆಪ್ಟೆಂಬರ್ 2023 ರಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದ್ದು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಅದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT