ಆಮ್ ಆದ್ಮಿ ಪಕ್ಷದ ಕಚೇರಿ PTI
ದೇಶ

'ಜೂನ್ 15ರೊಳಗೆ ಕಚೇರಿ ತೆರವುಗೊಳಿಸಿ': ಆಮ್ ಆದ್ಮಿ ಪಕ್ಷಕ್ಕೆ 'ಸುಪ್ರೀಂ' ಸೂಚನೆ

ದೆಹಲಿಯ ರೋಸ್ ಅವೆನ್ಯೂನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಜೂನ್ 15ರವರೆಗೆ ಕಾಲಾವಕಾಶ ನೀಡಿದೆ.

ನವದೆಹಲಿ: ದೆಹಲಿಯ ರೋಸ್ ಅವೆನ್ಯೂನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಜೂನ್ 15ರವರೆಗೆ ಕಾಲಾವಕಾಶ ನೀಡಿದೆ.

ತನ್ನ ನ್ಯಾಯಾಂಗ ಮೂಲಸೌಕರ್ಯವನ್ನು ವಿಸ್ತರಿಸಲು ದೆಹಲಿ ಹೈಕೋರ್ಟ್‌ಗೆ ಭೂಮಿಯನ್ನು ಹಂಚಿಕೆ ಮಾಡಲಾದ ಭೂಮಿ ಆಮ್ ಆದ್ಮಿ ಪಕ್ಷ ಕಚೇರಿ ಮಾಡಿಕೊಂಡಿರುವುದನ್ನು ಗಮನಿಸಿರುವ ಸುಪ್ರೀಂ ಕೋರ್ಟ್ ಕಚೇರಿ ಖಾಲಿ ಮಾಡಲು ಜೂನ್ 15 ಗಡವು ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಸೋಮವಾರ ಈ ಕುರಿತ ತೀರ್ಪು ನೀಡಿದೆ.

‘ನ್ಯಾಯಾಂಗಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಎಎಪಿಯ ಕಚೇರಿ ಇರುವ ಜಾಗವನ್ನು ದೆಹಲಿ ಹೈಕೋರ್ಟ್‌ಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 15ರ ಒಳಗೆ ಕಚೇರಿ ತೆರವುಗೊಳಿಸಬೇಕು‘ ಎಂದು ಎಎಪಿಗೆ ಹೇಳಿದೆ.

ಅಂತೆಯೇ ‘ಎಎಪಿ ಕಚೇರಿ ಇರುವ ಜಾಗದ ಮೇಲೆ ಆ ಪಕ್ಷಕ್ಕೆ ಯಾವುದೇ ಅಧಿಕಾರ ಇಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಜಾಗವನ್ನು ತೆರವುಗೊಳಿಸಲು 2024ರ ಜೂನ್ 15ರವರೆಗೆ ಕಾಲಾವಕಾಶ ನೀಡಲಾಗುತ್ತಿದೆ’ ಎಂದು ಪೀಠ ಹೇಳಿದೆ.

ಎಎಪಿ ಪಕ್ಷದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, 'ದೇಶದ ಆರು ರಾಷ್ಟ್ರೀಯ ಪಕ್ಷಗಳಲ್ಲಿ ಎಎಪಿ ಕೂಡ ಒಂದು. ರಾಷ್ಟ್ರೀಯ ಪಕ್ಷವಾಗಿ ನಮಗೆ ಏನೂ ಸಿಗುವುದಿಲ್ಲ. ಎಲ್ಲರೂ ಉತ್ತಮ ಸ್ಥಳಗಳಲ್ಲಿದ್ದಾಗ ನಮಗೆ ಬಾದರ್‌ಪುರ ನೀಡಲಾಗಿದೆ' ಎಂದು ಸಿಂಘ್ವಿ ಹೇಳಿದರು.

ಈ ಹಿಂದೆ ರೋಸ್ ಅವೆನ್ಯೂದಲ್ಲಿ ಹೈಕೋರ್ಟ್‌ಗೆ ಮಂಜೂರು ಮಾಡಿರುವ ಜಮೀನಿನಲ್ಲಿ ಆಪ್‌ ಪಕ್ಷದಿಂದ ಒತ್ತುವರಿಯಾಗಿತ್ತು. ಈ ಒತ್ತುವರಿ ತೆರವಿಗೆ ಸಭೆ ನಡೆಸುವಂತೆ ದೆಹಲಿ ಸರ್ಕಾರ ಮತ್ತು ದೆಹಲಿ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

SCROLL FOR NEXT