ತಪಸ್ ರಾಯ್ 
ದೇಶ

ಪಶ್ಚಿಮ ಬಂಗಾಳ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿ ಹಿರಿಯ ನಾಯಕ ತಪಸ್ ರಾಯ್

ಟಿಎಂಸಿಯ ಹಿರಿಯ ನಾಯಕ ತಪಸ್ ರಾಯ್ ಅವರು ಪಕ್ಷದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೋಲ್ಕತ್ತಾ: ಲೋಕಸಭೆ ಚುನಾವಣೆಗೆ ಮುನ್ನ ಟಿಎಂಸಿಯ ಹಿರಿಯ ನಾಯಕ ತಪಸ್ ರಾಯ್ ಅವರು ಪಕ್ಷದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ನಾನೀಗ ಸ್ವತಂತ್ರ ಹಕ್ಕಿಯಾಗಿದ್ದೇನೆ ಎಂದು ತಪಸ್ ರಾಯ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಯ್ ಅವರು, ಜನವರಿಯಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮ ನಿವಾಸದ ಮೇಲೆ ದಾಳಿ ನಡೆಸಿದಾಗ ಪಕ್ಷದ ನಾಯಕರು ನನ್ನ ಬೆಂಬಲಕ್ಕೆ ನಿಲ್ಲಲಿಲ್ಲ ಎಂದು ಟೀಕಿಸಿದರು.

ನಾಗರಿಕ ಸಂಸ್ಥೆಗಳಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತಪಸ್‌ ರಾಯ್‌ ಸೇರಿ ಹಲವು ನಾಯಕರ ಮನೆ, ಕಚೇರಿಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೆಂಬಲಕ್ಕೆ ನಿಂತಿಲ್ಲ. ತಮ್ಮ ಪರವಾಗಿ ಒಂದೇ ಮಾತು ಆಡಿಲ್ಲ. ಇತರ ನಾಯಕರ ಮನೆ ಮೇಲೂ ದಾಳಿ ನಡೆದಿತ್ತು. ಆಗ ಅವರು ಆ ನಾಯಕರ ಪರವಾಗಿ ನಿಂತಿದ್ದರು ಎಂದು ತಪಸ್​ ರಾಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಎಂಸಿ ತೊರೆದಿರುವ ತಪಸ್​ ರಾಯ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT