ಕಲ್ಕತ್ತಾ ಹೈಕೋರ್ಟ್ 
ದೇಶ

ಸಂದೇಶಖಾಲಿ ಪ್ರಕರಣ: ಷಹಜಹಾನ್ ಶೇಖ್ ರನ್ನು ಸಿಬಿಐಗೆ ಹಸ್ತಾಂತರಿಸಿ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಉತ್ತರ 24 ಪರಗಣದ ಸಂದೇಶ್‌ಖಾಲಿಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಮೇಲಿನ ದಾಳಿ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದೆ.

ಕೋಲ್ಕತ್ತಾ: ಉತ್ತರ 24 ಪರಗಣದ ಸಂದೇಶ್‌ಖಾಲಿಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಮೇಲಿನ ದಾಳಿ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠ, ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಹಾಗೂ ಪ್ರಮುಖ ಆರೋಪಿ ಷಹಜಹಾನ್ ಶೇಖ್‌ನನ್ನು ಸಂಜೆ 4.30 ರೊಳಗೆ ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.

ಪ್ರಕರಣದ ತನಿಖೆಗೆ ಸಿಬಿಐ ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನೂ ವಿಭಾಗೀಯ ಪೀಠ ರದ್ದುಗೊಳಿಸಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಪ್ರಾಂತ್ಯದಲ್ಲಿ ಪ್ರಭಾವಿಯಾಗಿರುವ ಟಿಎಂಸಿ ನಾಯಕ ಷಹಜಹಾನ್‌ ಶೇಖ್ ವಿರುದ್ದ ಹಿಂದೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೂಟಿ, ವಸೂಲಿ, ಭೂ ಅತಿಕ್ರಮಣ ಸೇರಿದಂತೆ ಹಲವು ಗಂಭೀರ ಸ್ವರೂಪದ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಭಾರೀ ತಿಕ್ಕಾಟಕ್ಕೆ ಕಾರಣವಾಗಿದೆ. ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆದ ಬಳಿಕ ಕಳೆದ 60 ದಿನಗಳಿಂದ ಷಹಜಹಾನ್ ಹಿಂದೆ ಬಿದ್ದಿರುವ ಬಿಜೆಪಿ, ಆತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಈ ನಡುವೆ ಬಂಧಿತ ಷಹಜಹಾನ್‌ನನ್ನು ಟಿಎಂಸಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ತಮ್ಮ ಪಕ್ಷ ರಾಜಧರ್ಮ ಮೆರೆದಿದೆ ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!