ಎ ರಾಜಾ PTI
ದೇಶ

ಭಾರತ ಒಂದು ದೇಶವೇ ಅಲ್ಲ, 'ನಾವು ರಾಮನ ಶತ್ರುಗಳು': ಮತ್ತೆ ನಾಲಿಗೆ ಹರಿಬಿಟ್ಟ ಡಿಎಂಕೆ ಸಂಸದ ಎ ರಾಜಾ

ಭಾರತ ಒಂದು ದೇಶವೆ ಅಲ್ಲ. ಇದು ವೈವಿಧ್ಯಮಯ ಆಚರಣೆಗಳು ಮತ್ತು ಸಂಸ್ಕೃತಿಗಳ ತವರೂರಿನ ಉಪಖಂಡವಾಗಿದೆ. ನಾವು ಎಂದಿಗೂ ಜೈ ಶ್ರೀರಾಮ್ ಎಂದು ಹೇಳುವುದಿಲ್ಲ ಎಂದು ಹೇಳುವ ಮೂಲಕ ಡಿಎಂಕೆ ಸಂಸದ ಎ ರಾಜಾ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ನವದೆಹಲಿ: ಭಾರತ ಒಂದು ದೇಶವೆ ಅಲ್ಲ. ಇದು ವೈವಿಧ್ಯಮಯ ಆಚರಣೆಗಳು ಮತ್ತು ಸಂಸ್ಕೃತಿಗಳ ತವರೂರಿನ ಉಪಖಂಡವಾಗಿದೆ. ನಾವು ಎಂದಿಗೂ ಜೈ ಶ್ರೀರಾಮ್ ಎಂದು ಹೇಳುವುದಿಲ್ಲ ಎಂದು ಹೇಳುವ ಮೂಲಕ ಡಿಎಂಕೆ ಸಂಸದ ಎ ರಾಜಾ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜಾ, ಹಿಂದೂ ನಂಬಿಕೆಗಳನ್ನು ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿದರು. ಇದೇ ವೇಳೆ ಮಣಿಪುರದ ಬಗ್ಗೆ 'ಅವಹೇಳನಕಾರಿ' ಹೇಳಿಕೆ ನೀಡಿದ್ದು ಮಾತ್ರವಲ್ಲದೆ ಭಾರತವನ್ನು ಒಂದು ದೇಶವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.

ಡಿಎಂ ಮುಖಂಡ ಎ. ರಾಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನನಗೆ ರಾಮಾಯಣ ಮತ್ತು ರಾಮನಲ್ಲಿ ನಂಬಿಕೆ ಇಲ್ಲ. 'ಇದು ನಿಮ್ಮ ಜೈ ಶ್ರೀ ರಾಮ್ ಆಗಿದ್ದರೆ, ಇದು ನಿಮ್ಮ ಭಾರತ್ ಮಾತಾ ಕೀ ಜೈ ಆಗಿದ್ದರೆ, ಜೈ ಶ್ರೀ ರಾಮ್ ಮತ್ತು ಭಾರತ್ ಮಾತಾ ಕೀ ಜೈ ಎಂದು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ, ತಮಿಳುನಾಡು ಇದನ್ನು ಒಪ್ಪಿಕೊಳ್ಳುವುದಿಲ್ಲ' ಎಂದು ರಾಜಾ ಹೇಳಿದ್ದಾರೆ. ನೀನು ಹೋಗಿ ಹೇಳು, ನಾವು ರಾಮನ ಶತ್ರುಗಳು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ

ಇದಾದ ನಂತರ ಅವರು ಹಿಂಡೆನ್‌ಬರ್ಗ್ ವರದಿಯನ್ನು ಉಲ್ಲೇಖಿಸಿ ಪ್ರಧಾನಿ ಮೋದಿಯನ್ನು ಗುರಿಯಾಗಿಸಿದರು. 'ಸಾಮಾನ್ಯ ಜನರನ್ನು ಲೂಟಿ ಮಾಡಲು ಮೋದಿ ಗೌತಮ್ ಅದಾನಿಗೆ ಸಹಾಯ ಮಾಡಿದ್ದಾರೆ' ಎಂದು ರಾಜಾ ಆರೋಪಿಸಿದರು. ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ಭೇಟಿ ನೀಡಿಲ್ಲ ಎಂದು ಟೀಕಿಸಿದ ಅವರು, ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸವಾಲು ಹಾಕಿದರು. ಅಷ್ಟೇ ಅಲ್ಲ, ಡಿಎಂಕೆ ಸಂಸದರು ತಮ್ಮ ಭಾಷಣದಲ್ಲಿ 'ಭಾರತವು ಒಂದು ರಾಷ್ಟ್ರವಲ್ಲ ಆದರೆ ಒಂದು ಉಪಖಂಡವಾಗಿದೆ' ಎಂದು ಹೇಳಿದರು. ಅವರು ತಮ್ಮ ಹಕ್ಕುಗಳನ್ನು ಬೆಂಬಲಿಸುವ ಸಂವಿಧಾನದ ಪೀಠಿಕೆಯನ್ನು ಸಹ ಉಲ್ಲೇಖಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿರುವ ರಾಜಾ ಅವರನ್ನು ಬಂಧಿಸಬೇಕು ಎಂದು ತಮಿಳುನಾಡಿನ ಬಿಜೆಪಿ ವಕ್ತಾರ ನಾರಾಯಣನ್ ತಿರುಪತಿ ಆಗ್ರಹಿಸಿದ್ದಾರೆ. ದೇಶದ ನಿಯಮಗಳು ಮತ್ತು ಕಾನೂನುಗಳಿಗೆ ಬದ್ಧರಾಗಿರುತ್ತೇನೆ ಎಂದು ಭಾರತದ ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಮುಖ್ಯ ಕರ್ತವ್ಯವಾಗಿದೆ. ಈ ರೀತಿ ಹೇಳಿಕೆ ನೀಡಿರುವ ರಾಜಾ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT