ಟೀ ಕುಡಿದ ಅಣ್ಣಾಮಲೈ 
ದೇಶ

Updated Tea Seller: ಟೀ ಮಾರುತ್ತಲೇ 'ಸ್ವಚ್ಛ ಭಾರತ್, ಡಿಜಿಟಲ್ ಇಂಡಿಯಾ' ಪಾಲನೆ, ಅಣ್ಣಾಮಲೈ ಶ್ಲಾಘನೆ, ಟೀ ಕುಡಿದು ಕೊಟ್ಟಿದ್ದೆಷ್ಟು ಗೊತ್ತಾ?

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಎನ್ ಮಣ್ಣ್, ಎನ್ ಮಕ್ಕಳ್ (ನನ್ನ ಭೂಮಿ, ನನ್ನ ಜನ) ಪಾದಯಾತ್ರೆಯ ಯಶಸ್ಸಿನ ಬಳಿಕ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತೆ ಸುದ್ದಿಯಲ್ಲಿದ್ದಾರೆ

ಚೆನ್ನೈ: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಎನ್ ಮಣ್ಣ್, ಎನ್ ಮಕ್ಕಳ್ (ನನ್ನ ಭೂಮಿ, ನನ್ನ ಜನ) ಪಾದಯಾತ್ರೆಯ ಯಶಸ್ಸಿನ ಬಳಿಕ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತೆ ಸುದ್ದಿಯಲ್ಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪಾಲ್ಗೊಳ್ಳುವಿಕೆ ಮೂಲಕ ಬೃಹತ್ ಪಾದಯಾತ್ರೆ ಕಾರ್ಯಕ್ರಮದ ಬಳಿಕ ಅಣ್ಣಾಮಲೈ ಲೋಕಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿದ್ದು, ಬಿಜೆಪಿ ಕಾರ್ಯಕ್ರಮದ ಬಳಿಕ ಕಾರ್ಯಕ್ರಮ ನಡೆದ ಮೈದಾನದ ಬಳಿ ಅಣ್ಣಾಮಲೈ ಗಾಡಿಯಲ್ಲಿ ಚಹಾ ಮಾರುತ್ತಿದ್ದ ವ್ಯಕ್ತಿಯ ಬಳಿ ನಡೆಸಿರುವ ಸಂಭಾಷಣೆ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಬಿಜೆಪಿ ಸಮಾವೇಶದ ಬಳಿಕ ಗಣ್ಯರು ತೆರಳುತ್ತಿದ್ದಂತೆಯೇ ಅಲ್ಲಿಯೇ ಮೈದಾನದಲ್ಲಿ ಟೀ ಮಾರುತ್ತಿದ್ದ ವ್ಯಕ್ತಿಯ ಬಳಿ ತೆರಳಿ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಈ ವೇಳೆ ಚಹಾ ಮಾರಾಟಗಾರನ ವ್ಯಾಪಾರಿ ತಂತ್ರಗಾರಿಕೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಅಣ್ಣಾಮಲೈ ಹೊಗಳಿಸಿದ್ದಾರೆ. ಅವರ ಬಳಿ ಚಹಾ ಸವಿದ ಅಣ್ಣಾಮಲೈ ಯುಪಿಐ ಮೂಲಕ ಹಣ ಪಾವತಿ ಮಾಡಿದ್ದು, ಇದನ್ನು ಡಿಜಿಟಲ್ ಇಂಡಿಯಾ ಪಾಲನೆ ಎಂದು ಶ್ಲಾಘಿಸಿದ್ದಾರೆ.

ಅಂತೆಯೇ ತಾವು ಕುಡಿದ ಟೀ ಕಪ್ ಅನ್ನು ಕೂಡ ಚಹಾ ಮಾರಾಟಗಾರ ಬ್ಯಾಗ್ ವೊಂದರಲ್ಲಿ ಸಂಗ್ರಹಿಸಿದ್ದು, ಸ್ವಚ್ಛ ಭಾರತ್ ಅಭಿಯಾನ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಟೀ ಕುಡಿದ ಅಣ್ಣಾಮಲೈ ಕೊಟ್ಟ ಹಣ ಎಷ್ಟು ಗೊತ್ತಾ?

ಇನ್ನು ಟೀ ಕುಡಿದ ಬಳಿಕ ಯುಪಿಐ ಮೂಲಕ ಹಣ ಪಾವತಿಸಿದ ಅಣ್ಣಾಮಲೈ ಚಹಾ ಮಾರಾಟಗಾರರ ಹುಟ್ಟಿದ ವರ್ಷದ ಸಂಖ್ಯೆ ಅಂದರೆ 1978ರೂ.ವನ್ನು ಪಾವತಿಸಿದರು.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT