ವಿಜಯ್ ಮಲ್ಯ-ನೀರವ್ ಮೋದಿ 
ದೇಶ

ದೆಹಲಿ: ನೀರವ್ ಮೋದಿ, ವಿಜಯ್ ಮಲ್ಯ ಜೊತೆಯಲ್ಲಿ ಪ್ರಧಾನಿ ಮೋದಿ ಚಿತ್ರವಿರುವ ಪೋಸ್ಟರ್ ಪ್ರತ್ಯಕ್ಷ; ಎಫ್ಐಆರ್ ದಾಖಲು

ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೋಸ್ಟರ್‌ಗಳು ಕೇಂದ್ರ ದೆಹಲಿಯ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ನವದೆಹಲಿ: ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೋಸ್ಟರ್‌ಗಳು ಕೇಂದ್ರ ದೆಹಲಿಯ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಪೋಸ್ಟರ್‌ಗಳು 'ಮೋದಿ ಕಾ ಅಸಲಿ ಪರಿವಾರ್' (ಮೋದಿಯವರ ನಿಜವಾದ ಕುಟುಂಬ) ಎಂಬ ಶೀರ್ಷಿಕೆಯನ್ನು ಹೊಂದಿದ್ದು, ಕೆಳಭಾಗದಲ್ಲಿ 'ಭಾರತೀಯ ಯುವ ಕಾಂಗ್ರೆಸ್' ಎಂದು ಬರೆಯಲಾಗಿದೆ.

ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೆಹಲಿ ಆಸ್ತಿ ವಿರೂಪಗೊಳಿಸುವಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಸದ್ಯ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ನವದೆಹಲಿ ಮುನ್ಸಿಪಲ್ ಕೌನ್ಸಿಲ್‌ನ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪೋಸ್ಟರ್‌ಗಳಲ್ಲಿ ಪ್ರಕಾಶಕರ ಹೆಸರು ಅಥವಾ ಅದನ್ನು ಹಾಕಿದ ವ್ಯಕ್ತಿಯ ಹೆಸರಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್‌ಜೆಡಿಯ ಲಾಲು ಪ್ರಸಾದ್ ಅವರ ಪ್ರಧಾನಿ ಮೋದಿಯವರಿಗೆ "ಕುಟುಂಬವಿಲ್ಲ" ಎಂಬ ಟೀಕೆಗೆ ಪ್ರತಿದಾಳಿ ನಡೆಸಿದ ಮೋದಿ ಸೋಮವಾರ 140 ಕೋಟಿ ಭಾರತೀಯರು ತಮ್ಮ "ಕುಟುಂಬ" ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ "ಮೋದಿ ಕಾ ಪರಿವಾರ್" ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಬಿಜೆಪಿ ತನ್ನ ನಾಯಕನ ಬೆನ್ನೆಲುಬಾಗಿ ನಿಂತಿದೆ.

ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯ ಬಯೋದಲ್ಲಿ "ಮೋದಿ ಕಾ ಪರಿವಾರ್" ಎಂದು ಸೇರಿಸಿರುವುದರಿಂದ, ಪರಾರಿಯಾದ ಉದ್ಯಮಿಗಳಾದ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಕೂಡ ಈ ಕುಟುಂಬದಲ್ಲಿದ್ದಾರೆಯೇ ಎಂದು ಕಾಂಗ್ರೆಸ್ ಮಂಗಳವಾರ ಪಕ್ಷವನ್ನು ಕೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ