ಚಂಪೈ ಸೊರೇನ್ 
ದೇಶ

ದೇಶದಲ್ಲೇ ಮೊದಲು: ವಿಧವಾ ಪುನರ್ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿದ ಜಾರ್ಖಂಡ್ ಸಿಎಂ!

ವಿಧವೆಯರ ಜೀವನ ಗುಣಮಟ್ಟ ಹೆಚ್ಚಳ ಮತ್ತು ಘನತೆಯ ಬದುಕು ನಡೆಸಲು ಅನುಕೂಲವಾಗುವಂತೆ ಮರು ವಿವಾಹವನ್ನು ಉತ್ತೇಜಿಸುವ ಯೋಜನೆಗೆ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.

ರಾಂಚಿ: ವಿಧವೆಯರ ಜೀವನ ಗುಣಮಟ್ಟ ಹೆಚ್ಚಳ ಮತ್ತು ಘನತೆಯ ಬದುಕು ನಡೆಸಲು ಅನುಕೂಲವಾಗುವಂತೆ ಮರು ವಿವಾಹವನ್ನು ಉತ್ತೇಜಿಸುವ ಯೋಜನೆಗೆ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.

ದೇಶದಲ್ಲೇ ಮೊದಲ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ವಿಧವಾ ಪುನರ್ವಿವಾಹ ಪ್ರೊತ್ಸಾಹ ಯೋಜನೆ' (ವಿಧವೆ ಪುನರ್ವಿವಾಹ ಪ್ರೋತ್ಸಾಹ ಯೋಜನೆ) ಪ್ರಾರಂಭಿಸಿದರು, ಇದರ ಅಡಿಯಲ್ಲಿ ಗಂಡನ ಮರಣದ ನಂತರ ಮತ್ತೆ ಮದುವೆಯಾಗಲು ನಿರ್ಧರಿಸಿದ ಮಹಿಳೆಯರು ಸರಕಾರದಿಂದ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ಪಡೆಯಲಿದ್ದಾರೆ.

ಫಲಾನುಭವಿಗೆ ಮದುವೆಯ ವಯಸ್ಸಾಗಿರಬೇಕು ಮತ್ತು ಸರ್ಕಾರಿ ಉದ್ಯೋಗಿ, ಪಿಂಚಣಿದಾರ ಅಥವಾ ಆದಾಯ ತೆರಿಗೆ ಪಾವತಿಸುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ, ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಫಲಾನುಭವಿಯು ಮರುಮದುವೆಯಾದ ದಿನಾಂಕದಿಂದ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು ಮತ್ತು ತನ್ನ ದಿವಂಗತ ಪತಿಯ ಮರಣ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ ಎಂದು ಅವರು ಹೇಳಿದರು. ಮಕ್ಕಳ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಕಾರ್ಯದರ್ಶಿ ಮನೋಜ್ ಕುಮಾರ್ ಮಾತನಾಡಿ, ತಮ್ಮ ಜೀವನ ಸಂಗಾತಿಯ ಮರಣದ ನಂತರ ಸಮಾಜದಲ್ಲಿ ಒಂಟಿಯಾಗಿರುವ ಮಹಿಳೆಯರು ಅಸಹಾಯಕರಾಗುತ್ತಾರೆ. ಅಂತಹ ಎಲ್ಲಾ ವಿಧವೆಯರು ಮತ್ತೆ ಮದುವೆಯಾಗಲು ನಿರ್ಧರಿಸಿದರೆ ರಾಜ್ಯವು ಅವರಿಗೆ ಆರ್ಥಿಕ ನೆರವು ನೀಡುತ್ತದೆ ಎಂದು ಅವರು ಹೇಳಿದರು.

ಮಹಿಳೆಯರನ್ನು ಸಬಲೀಕರಣಗೊಳಿಸುವ ಸಲುವಾಗಿ, ವಿಧವೆ ಪುನರ್ವಿವಾಹ ಪ್ರೊತ್ಸಾಹನ್ ಯೋಜನೆ’ಯನ್ನು ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಬುಧವಾರ ಪ್ರಾರಂಭಿಸಿದರು, ಇದರ ಅಡಿಯಲ್ಲಿ ಮತ್ತೆ ಮದುವೆಯಾಗುವ ವಿಧವೆಯರಿಗೆ 2 ಲಕ್ಷ ರೂ. ಈ ಯೋಜನೆಯು ವಿಧವೆಯರ ಆತ್ಮ ವಿಶ್ವಾಸಕ್ಕೆ ಉತ್ತೇಜನ ನೀಡುತ್ತದೆ ಮತ್ತು ಮಹಿಳೆಯರ ಮರುವಿವಾಹದ ಬಗ್ಗೆ ಸಾಮಾಜಿಕ ಅಭಿಪ್ರಾಯವನ್ನು ಬದಲಾಯಿಸುತ್ತದೆ ಎಂದು ಕುಮಾರ್ ಅಭಿಪ್ರಾಯ ಪಟ್ಚಿದ್ದಾರೆ.

ರಾಂಚಿಯ ತಾನಾ ಭಗತ್ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಯೋಜನೆಯ ಏಳು ಫಲಾನುಭವಿಗಳಿಗೆ ಒಟ್ಟು 14 ಲಕ್ಷ ರೂ.ಗಳನ್ನು ವಿತರಿಸಿದರು ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT