ಅಮಿತ್ ಶಾ 
ದೇಶ

ಲೋಕಸಭೆ ಚುನಾವಣೆ: ಬಿಜೆಪಿಯ ಸೀಟು ಹಂಚಿಕೆ ಪ್ಲಾನ್ ಗೆ ಮಹಾರಾಷ್ಟ್ರ ಮಿತ್ರಪಕ್ಷಗಳ ಬೇಸರ!

ಸೂತ್ರದ ಪ್ರಕಾರ, ರಾಜ್ಯದ ಒಟ್ಟು 48 ಸ್ಥಾನಗಳ ಪೈಕಿ 36 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಕ್ರಮವಾಗಿ ಎಂಟು ಮತ್ತು ನಾಲ್ಕು ಸ್ಥಾನಗಳಿಂದ ಕಣಕ್ಕೆ ಇಳಿಯಲಿವೆ.

ಮುಂಬಯಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಪ್ರವೇಶದ ನಂತರ, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯು ತನ್ನ ಸೀಟು ಹಂಚಿಕೆ ವಿವಾದವನ್ನು ಪರಿಹರಿಸಿದೆ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ 36:8:4 ಸೂತ್ರವನ್ನು ತಾತ್ಕಾಲಿಕವಾಗಿ ನಿರ್ಧರಿಸಿದೆ.

ಸೂತ್ರದ ಪ್ರಕಾರ, ರಾಜ್ಯದ ಒಟ್ಟು 48 ಸ್ಥಾನಗಳ ಪೈಕಿ 36 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಕ್ರಮವಾಗಿ ಎಂಟು ಮತ್ತು ನಾಲ್ಕು ಸ್ಥಾನಗಳಿಂದ ಕಣಕ್ಕೆ ಇಳಿಯಲಿವೆ. ಆದರೆ, ಬಿಜೆಪಿಯ ಎರಡೂ ಮಿತ್ರಪಕ್ಷಗಳು ತಮ್ಮ ಅತೃಪ್ತಿ ವ್ಯಕ್ತಪಡಿಸಿವೆ.

ಅಕೋಲಾ, ಜಲಗಾಂವ್ ಮತ್ತು ಸಂಭಾಜಿ ನಗರದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ನಂತರ, ಅಮಿತ್ ಶಾ ಮಂಗಳವಾರ ರಾತ್ರಿ ಮುಂಬೈಗೆ ತೆರಳಿದರು. ಮುಖ್ಯಮಂತ್ರಿ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.

ಉದ್ಧವ್ ಠಾಕ್ರೆ ಅವರನ್ನು ತೊರೆದು ನಮ್ಮೊಂದಿಗೆ ಬಂದಿರುವ 13 ಹಾಲಿ ಲೋಕಸಭಾ ಸದಸ್ಯರಿದ್ದಾರೆ, ಹೀಗಾಗಿ ನಾವು ಕನಿಷ್ಠ 13 ಸ್ಥಾನಗಳನ್ನು ಬಯಸಿದ್ದೇವೆ ಎಂದು ಶಿಂಧೆ ಹೇಳಿದರು. ಅಜಿತ್ ಪವಾರ್ ಒಂಬತ್ತು ಸ್ಥಾನಗಳನ್ನು ಕೋರಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸಿದ ನಾಯಕರೊಬ್ಬರು ತಿಳಿಸಿದ್ದಾರೆ. ಆದರೆ ಬಹು ಸಮೀಕ್ಷೆಯ ವರದಿಗಳು ಬೇರೆ ರೀತಿಯಲ್ಲಿ ಸೂಚಿಸುತ್ತಿವೆ ಎಂದು ಅಮಿತ್ ಶಾ ಅವರಿಗೆ ಹೇಳಿದರು.

ಮಿತ್ರಪಕ್ಷಗಳ ವಿರುದ್ಧ ಸ್ಪಷ್ಟವಾದ ಸಾರ್ವಜನಿಕ ಕೋಪವಿದೆ ಮತ್ತು ಅವರ ಅಭ್ಯರ್ಥಿಗಳು ಗೆಲ್ಲುವ ಅವಕಾಶಗಳು ಬಹಳ ಕಡಿಮೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಲ್ಲಿ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಉತ್ತಮ.

ಬಿಜೆಪಿಗೆ ಲೋಕಸಭೆಯಲ್ಲಿ ಸಾಧ್ಯವಾದಷ್ಟು ಸ್ಥಾನಗಳನ್ನು ಗೆಲ್ಲುವುದು ಮುಖ್ಯವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಒಪ್ಪಂದ ಮಾಡಿಕೊಳ್ಳುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT