ಸಿಬಿಐ 
ದೇಶ

ಸಂದೇಶ್‌ಖಾಲಿ ಪ್ರಕರಣ: ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ನಿವಾಸದಲ್ಲಿ ಸಿಬಿಐ ಶೋಧ

ಇ.ಡಿ ಅಧಿಕಾರಿಗಳ ತಂಡದ ಮೇಲೆ ನಡೆಸಿದ ದಾಳಿ ತನಿಖೆಗೆ ಸಂಬಂಧಿಸಿದಂತೆ ಶುಕ್ರವಾರ ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರ ಸಂದೇಶ್‌ಖಾಲಿಯಲ್ಲಿರುವ ನಿವಾಸವನ್ನು ಸಿಬಿಐ ಅಧಿಕಾರಿಗಳು ಶೋಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತಾ: ಇ.ಡಿ ಅಧಿಕಾರಿಗಳ ತಂಡದ ಮೇಲೆ ನಡೆಸಿದ ದಾಳಿ ತನಿಖೆಗೆ ಸಂಬಂಧಿಸಿದಂತೆ ಶುಕ್ರವಾರ ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರ ಸಂದೇಶ್‌ಖಾಲಿಯಲ್ಲಿರುವ ನಿವಾಸವನ್ನು ಸಿಬಿಐ ಅಧಿಕಾರಿಗಳು ಶೋಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಸರ್ಬೇರಿಯಾದ ಅಕುಂಚಿಪಾರಾ ಪ್ರದೇಶದ ಅವರ ಮನೆಯ ಸಮೀಪವಿರುವ ಪ್ರದೇಶಗಳಿಗೂ ಭೇಟಿ ನೀಡಿತು.

ಜನವರಿ 5ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ಇ.ಡಿ ಅಧಿಕಾರಿಗಳ ಮೇಲೆ ನಡೆಸಿದ ಗುಂಪು ದಾಳಿ ಪ್ರಕರಣದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಶೇಖ್ ಅವರನ್ನು ಬಂಧಿಸಲಾಯಿತು. ಪ್ರಕರಣ ಸಂಬಂಧ ಫೆಬ್ರುವರಿ 29ರಂದು ಪಶ್ಚಿಮ ಬಂಗಾಳ ಪೊಲೀಸರು ಶೇಖ್ ಅವರನ್ನು ಬಂಧಿಸಲಾಗಿತ್ತು.

ಸಿಬಿಐ ತಂಡದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಇ.ಡಿ ಅಧಿಕಾರಿಗಳು ಇದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳ ರಕ್ಷಣೆಗಾಗಿ ಕೇಂದ್ರೀಯ ಪಡೆಗಳ ದೊಡ್ಡ ತುಕಡಿಯನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಅಧಿಕಾರಿಗಳು ಶೇಖ್ ಅವರ ಮನೆಯ ಆವರಣವನ್ನು ಪ್ರವೇಶಿಸಲು ಇ.ಡಿ ಹಾಕಿದ್ದ ಸೀಲ್ ಅನ್ನು ತೆರೆದರು. ಅವರು ತಮ್ಮ ತನಿಖೆಗಾಗಿ ವಿಡಿಯೋಗ್ರಫಿ ಮತ್ತು ಈ ಪ್ರದೇಶವನ್ನು ಮ್ಯಾಪಿಂಗ್ ಮಾಡುತ್ತಿದ್ದಾರೆ.

ಗುರುವಾರ, ಶೇಖ್ ಅವರನ್ನು ಕಸ್ಟಡಿಗೆ ಪಡೆದ ನಂತರ, ಸಿಬಿಐ ಸಂದೇಶ್‌ಖಾಲಿಯಲ್ಲಿರುವ ಅವರ ಮನೆ ಮತ್ತು ಕಚೇರಿಗೆ ಭೇಟಿ ನೀಡಿತು. ಎರಡೂ ಆವರಣಗಳಿಗೆ ಬೀಗ ಹಾಕಿರುವುದನ್ನು ಕಂಡು, ತಂಡವು ಹೊರಡುವ ಮೊದಲು ಹೊರಗಿನಿಂದ ಫೋಟೊ ತೆಗೆದುಕೊಂಡಿತು.

ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಹಜಾನ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂದೇಶ್‌ಖಾಲಿಯ ಹಲವು ಮಹಿಳೆಯರು ಆರೋಪಿಸಿದ್ದು, ಅಕ್ರಮವಾಗಿ ರೈತರ ಭೂಮಿ ವಶಪಡಿಸಿಕೊಂಡ ಆರೋಪವೂ ಅವರ ಮೇಲಿದೆ. ಹೈಕೋರ್ಟ್ ಆದೇಶದ ಮೇರೆಗೆ ಶೇಖ್ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT