ಕೊಲೆಯಾದ ಯುವಕ 
ದೇಶ

ಮದುವೆಗೆ ಕೆಲವೇ ಗಂಟೆಗಳ ಮೊದಲು ಮಗನನ್ನೆ ಹತ್ಯೆ ಮಾಡಿದ ತಂದೆ!

ಮಗನ ಮದುವೆಗೆ ಕೆಲವೇ ಗಂಟೆ ಬಾಕಿ ಇರುವ ಹೊತ್ತಲ್ಲೇ ಜಿಮ್‌ ಮಾಲೀಕನೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.

ನವದೆಹಲಿ: ಮಗನ ಮದುವೆಗೆ ಕೆಲವೇ ಗಂಟೆ ಬಾಕಿ ಇರುವ ಹೊತ್ತಲ್ಲೇ ಜಿಮ್‌ ಮಾಲೀಕನೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.

ಗೌರವ್ ಸಿಂಘಾಲ್ (29) ಎಂಬಾತನನ್ನು ಆತನ ತಂದೆ ರಂಗಲಾಲ್ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ರಂಗಲಾಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗೌರವ್‌ ತನ್ನ ಮದುವೆಯ ಮೆರವಣಿಗೆಗೆ ಹೊರಟಿದ್ದ. ಈ ವೇಳೆ ಆತನ ತಂದೆಯೇ ಚೂಪಾದ ಆಯುಧ ಬಳಸಿ ಕೊಂದಿದ್ದಾನೆ.

ಗೌತಮ್‌ ಜಿಮ್ ನಡೆಸುತ್ತಿದ್ದ. ದೇವ್ಲಿ ಎಕ್ಸ್‌ಟೆನ್ಶನ್‌ನಲ್ಲಿರುವ ಮನೆಯಲ್ಲೇ ಆತನ ಎದೆಗೆ 15 ಬಾರಿ ಇರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಿಮ್‌ ಮಾಲೀಕನಾಗಿರುವ ಗೌರವ್‌ ಸಿಂಘಾಲ್ ಅವರಿಗೆ ಮದುವೆ ಇಷ್ಟವಿರಲಿಲ್ಲ. ಆದರೆ, ರಂಗಲಾಲ್‌ ಅವರು ಪದೇಪದೆ ಒತ್ತಾಯಿಸಿದ ಕಾರಣ ಅವರು ಮದುವೆಗೆ ಒಪ್ಪಿದ್ದರು.

ಇನ್ನು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಂಗಲಾಲ್‌ ಅವರನ್ನು ಗೌರವ್‌ ಸಿಂಘಾಲ್‌ ಅವರು ಅವಮಾನಿಸುತ್ತಿದ್ದರು. ಎಲ್ಲರ ಎದುರು ಮಗನಿಂದಲೇ ಅವಮಾನಕ್ಕೀಡಾದ ರಂಗಲಾಲ್‌ ಅವರು ಕುದ್ದುಹೋಗಿದ್ದರು. ಬುಧವಾರ ರಾತ್ರಿಯೂ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಕುಪಿತಗೊಂಡ ರಂಗಲಾಲ್‌ ಅವರು ಮಗನನ್ನೇ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಮದುವೆ ಮೆರವಣಿಗೆ ಮಾಡಲು ಮದುಮಗನಿಗಾಗಿ ಜನರು ಕಾಯುತ್ತಿದ್ದರು. ಆದರೆ ಗೌರವ್‌ ಬರಲಿಲ್ಲ. ಅನುಮಾನಗೊಂಡು ಅತಿಥಿಗಳು ಹುಡುಕಾಟ ನಡೆಸಿದ್ದಾರೆ. ಆದರೆ ಪಾರ್ಕ್‌ವೊಂದರಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಸಂಭ್ರಮದ ಮನೆಯಲ್ಲಿ ಶೋಕದ ವಾತಾವರಣ ಮಡುಗಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT