ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ 
ದೇಶ

ಬ್ಯಾಂಕ್ ಖಾತೆ ಜಪ್ತಿ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಆದಾಯ ತೆರಿಗೆ ನ್ಯಾಯಾಧಿಕರಣ

ಐ-ಟಿ ರಿಟರ್ನ್ ಸಲ್ಲಿಸದ ಕಾರಣಕ್ಕೆ ವಿಧಿಸಲಾಗಿದ್ದ 210 ಕೋಟಿ ರೂ.ಗಳ ದಂಡವನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ ಶುಕ್ರವಾರ ವಜಾಗೊಳಿಸಿದೆ.

ನವದೆಹಲಿ: ಐ-ಟಿ ರಿಟರ್ನ್ ಸಲ್ಲಿಸದ ಕಾರಣಕ್ಕೆ ವಿಧಿಸಲಾಗಿದ್ದ 210 ಕೋಟಿ ರೂ.ಗಳ ದಂಡವನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ ಶುಕ್ರವಾರ ವಜಾಗೊಳಿಸಿದೆ. ಅಲ್ಲದೆ ಪಕ್ಷದ ಜಪ್ತಿ ಮಾಡಿದ ಬ್ಯಾಂಕ್ ಖಾತೆಗಳನ್ನು ಬಿಡುಗಡೆ ಮಾಡಲು ನ್ಯಾಯಾಧಿಕರಣ ನಿರಾಕರಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಖಜಾಂಚಿ ಅಜಯ್ ಮಾಕೆನ್, ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಹಣವನ್ನು ಜಪ್ತಿ ಮಾಡಿದ ಆದೇಶ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಕಿಡಿ ಕಾರಿದ್ದಾರೆ.

"ಕಾಂಗ್ರೆಸ್ ಪಕ್ಷದ ಖಾತೆಯಲ್ಲಿನ 270 ಕೋಟಿ ರೂಪಾಯಿಯನ್ನು ಆದಾಯ ತೆರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದು, ಇಂತಹ ಪರಿಸ್ಥಿತಿಯಲ್ಲಿ ನ್ಯಾಯಯುತ ಚುನಾವಣೆಯನ್ನು ಹೇಗೆ ನಿರೀಕ್ಷಿಸಬಹುದು?" ಎಂದು ಅವರು ಪ್ರಶ್ನಿಸಿದ್ದಾರೆ.

ಈ ಸಂಬಂಧ ಪಕ್ಷ ಕಾನೂನಿನ ಎಲ್ಲಾ ಆಯ್ಕೆಗಳನ್ನು ಅನ್ವೇಷಿಸುತ್ತಿದೆ ಮತ್ತು "ಶೀಘ್ರದಲ್ಲೇ" ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಮಾಕೆನ್ ತಿಳಿಸಿದ್ದಾರೆ.

ನ್ಯಾಯಾಧಿಕರಣದ ಆದೇಶವನ್ನು ದೃಢಪಡಿಸಿದ ಕಾಂಗ್ರೆಸ್‌ ಕಾನೂನು ಘಟಕದ ಮುಖ್ಯಸ್ಥ ವಿವೇಕ್ ಟಂಖಾ ಅವರು, ಈ ವಿಷಯದಲ್ಲಿ ನ್ಯಾಯಾಧಿಕರಣ ತನ್ನ ಹಿಂದಿನ ಪೂರ್ವನಿದರ್ಶನಗಳನ್ನು ಸಹ ಅನುಸರಿಸಿಲ್ಲ ಮತ್ತು ಪಕ್ಷ ಶೀಘ್ರದಲ್ಲೇ ಹೈಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ಹೇಳಿದ್ದಾರೆ.

"ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಆದೇಶದಿಂದ ನಾವು ನಿರಾಶೆಗೊಂಡಿದ್ದೇವೆ. ನಾವು ಶೀಘ್ರದಲ್ಲೇ ಹೈಕೋರ್ಟ್‌ಗೆ ಹೋಗುತ್ತೇವೆ" ಎಂದು ಟಂಖಾ ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT