ಕೇದಾರನಾಥ ದೇವಾಲಯ (ಸಂಗ್ರಹ ಚಿತ್ರ) 
ದೇಶ

ಕೇದಾರನಾಥ ದೇವಾಲಯ ಮೇ 10ರಿಂದ ಭಕ್ತರ ದರ್ಶನಕ್ಕೆ ಮುಕ್ತ

ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ಬಿಕೆಟಿಸಿ ಅಧ್ಯಕ್ಷ ಅಜೇಂದ್ರ ಅಜಯ್ ಅವರು ಇಂದು ಕೇದಾರನಾಥ ಧಾಮ ತೆರೆಯುವ ಘೋಷಣೆ ಮಾಡಿದರು.

ಕೇದಾರನಾಥ: ಮೇ 10 ರಂದು ಬೆಳಗ್ಗೆ 7 ಗಂಟೆಗೆ ಭಕ್ತರಿಗಾಗಿ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆ ಎಂದು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ(BKTC) ಶುಕ್ರವಾರ ಮಹಾಶಿವರಾತ್ರಿಯ ಸಂದರ್ಭದಲ್ಲಿ ಪ್ರಕಟಿಸಿದೆ.

ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ಬಿಕೆಟಿಸಿ ಅಧ್ಯಕ್ಷ ಅಜೇಂದ್ರ ಅಜಯ್ ಅವರು ಇಂದು ಕೇದಾರನಾಥ ಧಾಮ ತೆರೆಯುವ ಘೋಷಣೆ ಮಾಡಿದರು.

ಪ್ರತಿ ವರ್ಷ ಲಕ್ಷಗಟ್ಟಲೆ ಜನ ಭೇಟಿ ನೀಡುವ ಹಿಮಾಲಯದ ಈ ದೇವಾಲಯದ ದ್ವಾರಗಳನ್ನು ಚಳಿಗಾಲದಲ್ಲಿ ಹಿಮದ ಕಾರಣದಿಂದಾಗಿ ಮುಚ್ಚಲಾಗುತ್ತದೆ.

ಮಹಾಶಿವರಾತ್ರಿಯ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ ಅಜಯ್ ಅವರು, ಕಳೆದ ಯಾತ್ರೆಯ ಋತುವಿನಲ್ಲಿ ಕೇದಾರನಾಥ ಧಾಮಕ್ಕೆ ದಾಖಲೆಯ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದು, ಈ ವರ್ಷ ಯಾತ್ರಿಕರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದರು.

ರುದ್ರಪ್ರಯಾಗದಲ್ಲಿರುವ ಕೇದಾರನಾಥ ಧಾಮದ ಬಾಗಿಲುಗಳನ್ನು ವರ್ಷದಲ್ಲಿ 6 ತಿಂಗಳು ಮುಚ್ಚಲಾಗುತ್ತದೆ. ಇನ್ನು, 6 ತಿಂಗಳ ಕಾಲ ಉಖಿಮಠ, ಪ್ರತಿ ವರ್ಷ ಮಹಾಶಿವರಾತ್ರಿಯ ದಿನದಂದು ಬಾಗಿಲು ತೆರೆಯುವ ದಿನಾಂಕವನ್ನು ಪ್ರಕಟಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT