ಭುವನೇಶ್ವರದ ಲಿಂಗರಾಜ ದೇವಾಲಯ 
ದೇಶ

ಶಿವರಾತ್ರಿ ಸಂಭ್ರಮ, ದೇವಾಲಯಗಳಲ್ಲಿ ಶಿವಸ್ಮರಣೆ, ಭಕ್ತರಿಂದ ಜಾಗರಣೆ

ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಶಿವಸ್ಮರಣೆ ಮಾಡಲಾಗುತ್ತಿದ್ದು, ಭಕ್ತರು ಇಡೀ ರಾತ್ರಿ ಜಾಗರಣೆ ಮಾಡುತ್ತಿರುವ ದೃಶ್ಯ ಕಂಡುಬರುತ್ತಿದೆ.

ನವದೆಹಲಿ: ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಶಿವಸ್ಮರಣೆ ಮಾಡಲಾಗುತ್ತಿದ್ದು, ಭಕ್ತರು ಜಾಗರಣೆ ಮಾಡುತ್ತಿರುವ ದೃಶ್ಯ ಕಂಡುಬರುತ್ತಿದೆ.

ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿರುವ ದೇವಾಲಯಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದು, ಹೋಮ, ಹವನ, ಮಹಾ ಮಂಗಳಾರತಿ ಮತ್ತಿತರ ಹಲವು ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಭುವನೇಶ್ವರ, ಮುಂಬೈ, ಪಾಟ್ನಾ ಮತ್ತಿತರ ಕಡೆಗಳಲ್ಲಿ ಶಿವನ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲಾಯಿತು.

ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿರುವ ದೇವಾಲಯಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದು, ಹೋಮ, ಹವನ, ಮಹಾ ಮಂಗಳಾರತಿ ಮತ್ತಿತರ ಹಲವು ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಭುವನೇಶ್ವರ, ಮುಂಬೈ, ಪಾಟ್ನಾ ಮತ್ತಿತರ ಕಡೆಗಳಲ್ಲಿ ಶಿವನ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲಾಯಿತು.

ಬೆಂಗಳೂರಿನರಿನ ಗವಿಪುರದ ಗವಿಗಂಗಾಧರೇಶ್ವರ ದೇವಾಲಯ, ಮಲ್ಲೇಶ್ವರ ಕಾಡು ಮಲ್ಲೇಶ್ವರ ದೇವಾಲಯ ಮತ್ತಿತರ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಮತ್ತಿಕೆರೆ ಮೈದಾನದಲ್ಲಿ ರಾಮಮಂದಿರದ ಜೊತೆಗೆ ರಾಮ ಹಾಗೂ ಶಿವನ ಬೃಹತ್ ಪ್ರತಿಕ್ರಿತಿ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

ರಾತ್ರಿಯಿಡೀ ಜಾಗರಣೆ: ಪ್ರಮುಖ ದೇವಾಲಯಗಳಲ್ಲಿ ರಾತ್ರಿಯಿಡೀ ಜಾಗರಣೆ ವ್ಯವಸ್ಥೆ ಮಾಡಲಾಗಿದೆ. ಜಾಗರಣೆ ಅಂಗವಾಗಿ ನಾಟಕೋತ್ಸವ, ಸಂಗೀತೋತ್ಸವ ಮತ್ತಿತರ ಸಾಂಸ್ಕ್ರೃತಿಕ ಕಾರ್ಯಕ್ರಮಗಳನ್ನು ವಿವಿಧ ಸಂಘ- ಸಂಸ್ಥೆಗಳು ಆಯೋಜಿಸಿದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ