ಎನ್.ಚಂದ್ರಬಾಬು ನಾಯ್ಡು, ಅಮಿತ್ ಶಾ 
ದೇಶ

ಲೋಕಸಭಾ ಚುನಾವಣೆ: ಬಿಜೆಪಿ ಜೊತೆಗೆ ಮೈತ್ರಿ, 17 ಸ್ಥಾನಗಳಲ್ಲಿ ಟಿಡಿಪಿ ಸ್ಪರ್ಧೆ

ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಅವರ ನಡುವೆ ಮಾತುಕತೆ ನಡೆದಿದೆ.

ನವದೆಹಲಿ: ಪ್ರಾದೇಶಿಕ ಪಕ್ಷವಾಗಿರುವ ತೆಲುಗು ದೇಶಂ ಪಕ್ಷ( ಟಿಡಿಪಿ) ಎನ್ ಡಿಎ ಮೈತ್ರಿಕೂಟ ಸೇರಲು ಸಜ್ಜಾಗಿದೆ. ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಅವರ ನಡುವೆ ಮಾತುಕತೆ ನಡೆದಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಬಾಬು ನಾಯ್ಡು, ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಏಪ್ರಿಲ್-ಮೇನಲ್ಲಿ ನಡೆಯಲಿರುವ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದು, ಒಟ್ಟಾಗಿ ಚುನಾವಣೆ ಗೆಲ್ಲುವ ವಿಶ್ವಾಸವಿದೆ ಎಂದರು. ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಯಲಿದೆ.

ರಾಜ್ಯದ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಮತ್ತು ಮುಖ್ಯಮಂತ್ರಿ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ ನಾಯ್ಡು, "ಆಂಧ್ರಪ್ರದೇಶವು ಹೀನಾಯವಾಗಿ ನಾಶವಾಗಿದೆ. ಬಿಜೆಪಿ ಮತ್ತು ಟಿಡಿಪಿ ಒಗ್ಗೂಡುವುದು ದೇಶ ಮತ್ತು ರಾಜ್ಯಕ್ಕೆ ಗೆಲುವಿನ ಸನ್ನಿವೇಶವಾಗಿದೆ" ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಡಿ ದೇಶದಲ್ಲಿ ಹಲವಾರು ಒಳ್ಳೆಯ ಕೆಲಸಗಳು ನಡೆಯುತ್ತಿವೆ ಆದರೆ ದಕ್ಷಿಣ ರಾಜ್ಯವು ಹಿಂದುಳಿದಿದೆ. ಸಂಪತ್ತು ಸೃಷ್ಟಿ ಮೋದಿಯವರಿಗೆ ಮೊದಲ ಆದ್ಯತೆಯಾಗಿದ್ದರೆ, ವೈಎಸ್‌ಆರ್ ಕಾಂಗ್ರೆಸ್‌ಗೆ 'ಸಂಪತ್ತು ನಾಶ'ವು ಮೊದಲ ಆದ್ಯತೆಯಾಗಿದೆ ಎಂದು ನಾಯ್ಡು ಹೇಳಿದರು.

ಮೈತ್ರಿಕೂಟದಲ್ಲಿ ಪ್ರತಿ ಪಕ್ಷಗಳು ಸ್ಪರ್ಧಿಸುವ ಸ್ಥಾನಗಳ ಸಂಖ್ಯೆಯನ್ನು ಅವರು ನಿರ್ದಿಷ್ಟಪಡಿಸದಿದ್ದರೂ, ಬಿಜೆಪಿ ಮತ್ತು ಜನಸೇನೆ ಒಟ್ಟಿಗೆ ಎಂಟು ಲೋಕಸಭೆ ಮತ್ತು 30 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.

ಇನ್ನುಳಿದ 17 ಲೋಕಸಭೆ ಮತ್ತು 145 ವಿಧಾನಸಭಾ ಸ್ಥಾನಗಳಿಂದ ಟಿಡಿಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಲೋಕಸಭೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, ದಕ್ಷಿಣ ರಾಜ್ಯದ ಆರು ಲೋಕಸಭೆ ಮತ್ತು ಅಷ್ಟೂ ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT