ಪ್ರಾತಿನಿಧಿಕ ಚಿತ್ರ 
ದೇಶ

ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಟಿಎಂಸಿ: ನಾಮಪತ್ರ ಹಿಂಪಡೆಯುವ ಮುನ್ನ ಯಾವಾಗ ಬೇಕಾದರೂ ಮೈತ್ರಿ ಸಾಧ್ಯತೆ- ಕಾಂಗ್ರೆಸ್

ಪಶ್ಚಿಮ ಬಂಗಾಳದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಟಿಎಂಸಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ, ನಾಮಪತ್ರ ಹಿಂಪಡೆಯುವವರೆಗೂ ಮೈತ್ರಿಗೆ ತನ್ನ ಬಾಗಿಲು ತೆರೆದಿದೆ ಮತ್ತು ಯಾವುದೇ ಒಪ್ಪಂದವನ್ನು ಮಾತುಕತೆಗಳಿಂದ ಅಂತಿಮಗೊಳಿಸಬೇಕು ಹೊರತು ಏಕಪಕ್ಷೀಯ ಪ್ರಕಟಣೆಗಳಿಂದ ಅಲ್ಲ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಟಿಎಂಸಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ, ನಾಮಪತ್ರ ಹಿಂಪಡೆಯುವವರೆಗೂ ಮೈತ್ರಿಗೆ ತನ್ನ ಬಾಗಿಲು ತೆರೆದಿದೆ ಮತ್ತು ಯಾವುದೇ ಒಪ್ಪಂದವನ್ನು ಮಾತುಕತೆಗಳಿಂದ ಅಂತಿಮಗೊಳಿಸಬೇಕು ಹೊರತು ಏಕಪಕ್ಷೀಯ ಪ್ರಕಟಣೆಗಳಿಂದ ಅಲ್ಲ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ರಾಜ್ಯದ ಲೋಕಸಭೆ ಚುನಾವಣೆಗೆ 42 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು.

'ಸೀಟು ಹಂಚಿಕೆ ಕುರಿತಾದ ಮಾತುಕತೆಗೆ ನಮ್ಮ ಬಾಗಿಲು ಯಾವಾಗಲೂ ತೆರೆದಿರುತ್ತದೆ ಮತ್ತು ನಾಮಪತ್ರ ಹಿಂತೆಗೆದುಕೊಳ್ಳುವ ಮೊದಲು ಯಾವುದೇ ಸಮಯದಲ್ಲಿಯೂ ಟಿಎಂಸಿ ಜೊತೆಗೆ ಮೈತ್ರಿ ಸಂಭವಿಸಬಹುದು' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬೆಳವಣಿಗೆಯ ಬಗ್ಗೆ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಗೌರವಾನ್ವಿತ ಟಿಎಂಸಿಯೊಂದಿಗೆ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತನ್ನ ಬಯಕೆಯನ್ನು ಪದೇ ಪದೆ ವ್ಯಕ್ತಪಡಿಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

'ಸೀಟು ಹಂಚಿಕೆಯಂತಹ ಒಪ್ಪಂದವನ್ನು ಮಾತುಕತೆಗಳ ಮೂಲಕ ಅಂತಿಮಗೊಳಿಸಬೇಕು ಮತ್ತು ಏಕಪಕ್ಷೀಯ ಘೋಷಣೆಗಳಿಂದಲ್ಲ ಎಂಬುದನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಯಾವಾಗಲೂ ಸಮರ್ಥಿಸಿಕೊಂಡಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಯಾವಾಗಲೂ ಇಂಡಿಯಾ ಮೈತ್ರಿಕೂಟವು ಒಟ್ಟಾಗಿ ಬಿಜೆಪಿ ವಿರುದ್ಧ ಹೋರಾಡಲು ಬಯಸುತ್ತದೆ' ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಮತ್ತು ಟಿಎಂಸಿ ನಾಯಕರು ಇತ್ತೀಚಿನ ದಿನಗಳಲ್ಲಿ ಮಾತಿನ ಸಮರದಲ್ಲಿ ತೊಡಗಿದ್ದರು. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಕಾಂಗ್ರೆಸ್‌ಗೆ ಎರಡಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದೆ.

ಕಾಂಗ್ರೆಸ್ ಪಶ್ಚಿಮ ಬಂಗಾಳದಿಂದ ಇಬ್ಬರು ಸಂಸದರನ್ನು ಹೊಂದಿದೆ.

ಟಿಎಂಸಿ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಒಂದಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT