ಸಾಂದರ್ಭಿಕ ಚಿತ್ರ 
ದೇಶ

ಮಾ. 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕ ಸಾಧ್ಯತೆ

ಮಾರ್ಚ್ 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರು ನೇಮಕವಾಗುವ ಸಾಧ್ಯತೆಯಿದೆ. ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಖಾಲಿಯಾದ ಸ್ಥಾನಗಳಿಗೆ ಪ್ರಧಾನಿ ನೇತೃತ್ವದ ಸಮಿತಿಯು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಮಾರ್ಚ್ 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರು ನೇಮಕವಾಗುವ ಸಾಧ್ಯತೆಯಿದೆ. ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಖಾಲಿಯಾದ ಸ್ಥಾನಗಳಿಗೆ ಪ್ರಧಾನಿ ನೇತೃತ್ವದ ಸಮಿತಿಯು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕೆಲವೇ ದಿನಗಳಲ್ಲಿ ಕೇಂದ್ರ ಚುನಾವಣಾ ಸಮಿತಿಯು ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ.

ಶುಕ್ರವಾರ ಬೆಳಗ್ಗೆ ಗೋಯೆಲ್ ಹಠಾತ್ ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಕಾನೂನು ಸಚಿವಾಲಯವು ಅಧಿಸೂಚನೆಯನ್ನು ಇದನ್ನು ಹೊರಡಿಸಿದೆ. ಇದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಚುನಾವಣಾ ಪ್ರಾಧಿಕಾರದ ಏಕೈಕ ಸದಸ್ಯರನ್ನಾಗಿ ಬಿಡುತ್ತದೆ. ಪಾಂಡೆ ಅವರು ಫೆಬ್ರವರಿ 14 ರಂದು 65 ವರ್ಷಗಳನ್ನು ಪೂರೈಸಿದ ನಂತರ ಅಧಿಕಾರವನ್ನು ತ್ಯಜಿಸಿದ್ದರು.

ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರ ನೇತೃತ್ವದಲ್ಲಿ ಗೃಹ ಕಾರ್ಯದರ್ಶಿ, ಸಿಬ್ಬಂದಿ ಇಲಾಖೆ ಮತ್ತು ತರಬೇತಿ ಕಾರ್ಯದರ್ಶಿಗಳನ್ನು ಒಳಗೊಂಡ ಶೋಧನಾ ಸಮಿತಿಯು ಮೊದಲಿಗೆ ಖಾಲಿಯಿರುವ ಎರಡು ಹುದ್ದೆಗಳಿಗೆ ತಲಾ ಐದು ಹೆಸರುಗಳ ಎರಡು ಪ್ರತ್ಯೇಕ ಸಮಿತಿ ರೂಪಿಸುತ್ತದೆ. ನಂತರ, ಪ್ರಧಾನಿ ಮತ್ತು ಕೇಂದ್ರ ಸಚಿವರು, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಚುನಾವಣಾ ಆಯುಕ್ತ ಸ್ಥಾನಕ್ಕೆ ಇಬ್ಬರ ಹೆಸರನ್ನು ಸೂಚಿಸಲಿದೆ. ನಂತರ ರಾಷ್ಟ್ರಪತಿ ಚುನಾವಣಾ ಆಯುಕ್ತರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ.

ಆಯ್ಕೆ ಸಮಿತಿಯು ಸದಸ್ಯರ ಅನುಕೂಲಕ್ಕೆ ಅನುಗುಣವಾಗಿ ಮಾರ್ಚ್ 13 ಅಥವಾ 14 ರಂದು ಸಭೆ ನಡೆಸಬಹುದು ಮತ್ತು ಮಾರ್ಚ್ 15 ರೊಳಗೆ ನೇಮಕಾತಿ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT