ಸಾಂದರ್ಭಿಕ ಚಿತ್ರ 
ದೇಶ

ಹರ್ಯಾಣ: ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ 6 ಸಾವು, 6 ಮಂದಿಗೆ ಗಾಯ

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.

ಚಂಡೀಗಢ: ಪಂಕ್ಚರ್ ಆಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.

ಖಾರ್ಖರಾ ಗ್ರಾಮದ ಬಳಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವಿಗೀಡಾಗಿದ್ದಾರೆ. ಟೈರ್ ಪಂಕ್ಚರ್ ಆಗಿದ್ದರಿಂದ ಕಾರನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು.

ಖಾರ್ಖರಾ ಗ್ರಾಮದ ಬಳಿ ಎಕ್ಸ್‌ಯುವಿಯಲ್ಲಿದ್ದವರು ತಮ್ಮ ವಾಹನದ ಟೈರ್‌ಗಳನ್ನು ಬದಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಮತ್ತೊಂದು ಕಾರು ಜನರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರು ಖಟೂ ಗ್ರಾಮದಿಂದ ದೆಹಲಿಗೆ ಹಿಂತಿರುಗುತ್ತಿತ್ತು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರ ಮರಣೋತ್ತರ ಪರೀಕ್ಷೆ ವರದಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT