ಶರದ್ ಪವಾರ್ 
ದೇಶ

ವಿಪಕ್ಷ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಶರದ್ ಪವಾರ್

ವಿರೋಧ ಪಕ್ಷದ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ವಾಗ್ದಾಳಿ ನಡೆಸಿದ್ದು, ಇ.ಡಿಯನ್ನು ಬಿಜೆಪಿಯ 'ಬೆಂಬಲಿತ ಪಕ್ಷ' ಎಂದು ಕರೆದಿದ್ದಾರೆ.

ಪುಣೆ: ವಿರೋಧ ಪಕ್ಷದ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು 'ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್‌ಚಂದ್ರ ಪವಾರ್' (ಎನ್‌ಸಿಪಿ (ಎಸ್‌ಪಿ)) ಮುಖ್ಯಸ್ಥ ಶರದ್ ಪವಾರ್ ಸೋಮವಾರ ವಾಗ್ದಾಳಿ ನಡೆಸಿದ್ದು, ಇ.ಡಿಯನ್ನು ಬಿಜೆಪಿಯ 'ಬೆಂಬಲಿತ ಪಕ್ಷ' ಎಂದು ಕರೆದಿದ್ದಾರೆ.

ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2005 ಮತ್ತು 2023ರ ನಡುವಿನ ಇ.ಡಿ ಕ್ರಮಗಳ ಅಂಕಿಅಂಶಗಳನ್ನು ಉಲ್ಲೇಖಿಸಿ, ಅದು ಈ ಅವಧಿಯಲ್ಲಿ 5,806 ಪ್ರಕರಣಗಳನ್ನು ದಾಖಲಿಸಿದೆ ಮತ್ತು ಅವುಗಳಲ್ಲಿ 25 ಮಾತ್ರ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

'ಪ್ರಕರಣಗಳ ವಿಲೇವಾರಿ ದರವು ಶೇ 0.42 ಮತ್ತು ಶಿಕ್ಷೆಯ ಪ್ರಮಾಣವು ಕೇವಲ ಶೇ 0.40 ರಷ್ಟು ಆಗಿದೆ. ಇ.ಡಿಯ ಬಜೆಟ್ 2022ರಲ್ಲಿ 300 ಕೋಟಿ ರೂ.ಗಳಷ್ಟಿತ್ತು. ನಂತರ 404 ಕೋಟಿ ರೂ.ಗಳಿಗೆ ಏರಿದೆ ಎಂದರು.

2005 ಮತ್ತು 2023ರ ನಡುವೆ ಯುಪಿಎ ಸೇರಿದಂತೆ ಎರಡು ಸರ್ಕಾರಗಳು ಅಧಿಕಾರದಲ್ಲಿದ್ದವು. ಯುಪಿಎ ಆಡಳಿತದಲ್ಲಿ ಇ.ಡಿ 26 ನಾಯಕರನ್ನು ತನಿಖೆ ಮಾಡಿದೆ. ಅವರಲ್ಲಿ ಐವರು ಕಾಂಗ್ರೆಸ್ ಮತ್ತು ಮೂವರು ಬಿಜೆಪಿ ನಾಯಕರಾಗಿದ್ದಾರೆ. ಯುಪಿಎ ಆಡಳಿತದ ಅವಧಿಯಲ್ಲಿ ಇ.ಡಿ ಕ್ರಮವು ರಾಜಕೀಯ ಪ್ರೇರಿತವಾಗಿರಲಿಲ್ಲ. ಆದರೆ, 2014ರ ನಂತರ ಒಬ್ಬನೇ ಒಬ್ಬ ಬಿಜೆಪಿ ನಾಯಕನನ್ನು ವಿಚಾರಣೆಗೆ ಒಳಪಡಿಸಿಲ್ಲ' ಎಂದು ಪವಾರ್ ಹೇಳಿದರು.

ಈ ಅಂಕಿಅಂಶಗಳು ಬಿಜೆಪಿ ಸರ್ಕಾರದ ಅಡಿಯಲ್ಲಿ ಇ.ಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿವೆ ಎಂಬ ಅನುಮಾನವನ್ನು ಹುಟ್ಟುಹಾಕುತ್ತವೆ. ಇ.ಡಿಯು ಬಿಜೆಪಿಯ ಬೆಂಬಲಿಗ ಪಕ್ಷವಾಗಿ ಮಾರ್ಪಟ್ಟಿರುವುದನ್ನು ಇದು ಸೂಚಿಸುತ್ತದೆ. ಇ.ಡಿ ಕ್ರಮಗಳ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿರುತ್ತದೆ. ಬಿಜೆಪಿಯಿಂದ ಆದೇಶ ಬಂದಂತೆ ತೋರುತ್ತಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಇ.ಡಿ ದುರ್ಬಳಕೆಯಾಗಿರಲಿಲ್ಲ, ಆದರೆ ಈಗ ಪ್ರತಿಪಕ್ಷ ನಾಯಕರಲ್ಲಿ ಭಯ ಮೂಡಿಸಲು ತನಿಖಾ ಸಂಸ್ಥೆಯನ್ನು ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಶರದ್ ಪವಾರ್ ಅವರ ಮೊಮ್ಮಗನಾಗಿರುವ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಅವರ ಒಡೆತನದ ಸಕ್ಕರೆ ಕಾರ್ಖಾನೆಯ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

SCROLL FOR NEXT