ಸಾಂದರ್ಭಿಕ ಚಿತ್ರ 
ದೇಶ

ಮಸೂದೆ ಅಂಗೀಕಾರವಾದ ನಾಲ್ಕು ವರ್ಷಗಳ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ

ಲೋಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನ್ನು ಸೋಮವಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಂಡ ನಾಲ್ಕು ವರ್ಷಗಳ ನಂತರ, ಲೋಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನ್ನು ಸೋಮವಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ.

2019ರಲ್ಲಿ ಸಂಸತ್ತಿನಲ್ಲಿ ಸಿಎಎಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಆದರೆ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಗೃಹ ಸಚಿವಲಾ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.

E_gazette_CAA.pdf
Preview

2019ರ ಡಿಸೆಂಬರ್ 11ರಂದು ಸಂಸತ್​ನಲ್ಲಿ ಸಿಎಎ ಅಂಗೀಕಾರಗೊಂಡಿತ್ತು. ಇದೀಗ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಬಿದ್ದಿದ್ದು, 2014ರ ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದವರಿಗೆ ಈ ಕಾಯ್ದೆ ಅನ್ವಯವಾಗುತ್ತದೆ.

ಈ ಮೊದಲು 11 ವರ್ಷ ಭಾರತದಲ್ಲೇ ನೆಲೆಸಿದವರಿಗೆ ಪೌರತ್ವ ಪಡೆಯಲು ಅವಕಾಶವಿತ್ತು. ಆದರೆ ತಿದ್ದುಪಡಿ ಮೂಲಕ 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದ್ದು, ಮುಸ್ಲಿಮೇತರ ವ್ಯಕ್ತಿಗಳು 6 ವರ್ಷ ಕಾಲ ಅಥವಾ ಅದಕ್ಕೂ ಮೇಲ್ಪಟ್ಟು ಭಾರತದಲ್ಲೇ ವಾಸ ಮಾಡಿದ್ದರೆ ಅಂಥವರಿಗೆ ಪೌರತ್ವ ನೀಡಲಾಗುತ್ತದೆ. ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್​, ಪಾರ್ಸಿಗಳಿಗೆ ಪೌರತ್ವ ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT