ಸಾಂದರ್ಭಿಕ ಚಿತ್ರ 
ದೇಶ

ಮಸೂದೆ ಅಂಗೀಕಾರವಾದ ನಾಲ್ಕು ವರ್ಷಗಳ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ

ಲೋಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನ್ನು ಸೋಮವಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಂಡ ನಾಲ್ಕು ವರ್ಷಗಳ ನಂತರ, ಲೋಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನ್ನು ಸೋಮವಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ.

2019ರಲ್ಲಿ ಸಂಸತ್ತಿನಲ್ಲಿ ಸಿಎಎಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಆದರೆ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಗೃಹ ಸಚಿವಲಾ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.

E_gazette_CAA.pdf
Preview

2019ರ ಡಿಸೆಂಬರ್ 11ರಂದು ಸಂಸತ್​ನಲ್ಲಿ ಸಿಎಎ ಅಂಗೀಕಾರಗೊಂಡಿತ್ತು. ಇದೀಗ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಬಿದ್ದಿದ್ದು, 2014ರ ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದವರಿಗೆ ಈ ಕಾಯ್ದೆ ಅನ್ವಯವಾಗುತ್ತದೆ.

ಈ ಮೊದಲು 11 ವರ್ಷ ಭಾರತದಲ್ಲೇ ನೆಲೆಸಿದವರಿಗೆ ಪೌರತ್ವ ಪಡೆಯಲು ಅವಕಾಶವಿತ್ತು. ಆದರೆ ತಿದ್ದುಪಡಿ ಮೂಲಕ 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದ್ದು, ಮುಸ್ಲಿಮೇತರ ವ್ಯಕ್ತಿಗಳು 6 ವರ್ಷ ಕಾಲ ಅಥವಾ ಅದಕ್ಕೂ ಮೇಲ್ಪಟ್ಟು ಭಾರತದಲ್ಲೇ ವಾಸ ಮಾಡಿದ್ದರೆ ಅಂಥವರಿಗೆ ಪೌರತ್ವ ನೀಡಲಾಗುತ್ತದೆ. ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್​, ಪಾರ್ಸಿಗಳಿಗೆ ಪೌರತ್ವ ನೀಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ