ಸೋನಿಯಾ,ಖರ್ಗೆ, ರಾಹುಲ್ 
ದೇಶ

ಲೋಕಸಭಾ ಚುನಾವಣೆ: 40 ಕೈ ಅಭ್ಯರ್ಥಿಗಳ ಹೆಸರು ಅಂತಿಮ, ಚಿಂದ್ವಾರದಿಂದ ಕಮಲ್ ನಾಥ್ ಪುತ್ರನಿಗೆ ಟಿಕೆಟ್

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ರಾಜ್ಯಗಳಾದ ಗುಜರಾತ್, ರಾಜಸ್ಥಾನ, ಉತ್ತರಾಖಂಡ, ಮಧ್ಯಪ್ರದೇಶ ಮತ್ತು ಅಸ್ಸಾಂನಲ್ಲಿನ 60 ಕ್ಕೂ ಹೆಚ್ಚು ಸ್ಥಾನಗಳ ಕುರಿತು ಕಾಂಗ್ರೆಸ್ ಉನ್ನತ ನಾಯಕತ್ವ ಸೋಮವಾರ ಚರ್ಚಿಸಿದ್ದು, ಸುಮಾರು 40 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ರಾಜ್ಯಗಳಾದ ಗುಜರಾತ್, ರಾಜಸ್ಥಾನ, ಉತ್ತರಾಖಂಡ, ಮಧ್ಯಪ್ರದೇಶ ಮತ್ತು ಅಸ್ಸಾಂನಲ್ಲಿನ 60 ಕ್ಕೂ ಹೆಚ್ಚು ಸ್ಥಾನಗಳ ಕುರಿತು ಕಾಂಗ್ರೆಸ್ ಉನ್ನತ ನಾಯಕತ್ವ ಸೋಮವಾರ ಚರ್ಚಿಸಿದ್ದು, ಸುಮಾರು 40 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.

ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಅವರನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಮತ್ತು ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಅವರನ್ನು ರಾಜಸ್ಥಾನದ ಜಲೋರ್ ನಿಂದ ಮತ್ತೊಮ್ಮೆ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣೆಗೆ ಮುನ್ನ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ಇಬ್ಬರೂ ಬಿಜೆಪಿಗೆ ಬದಲಾಗುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಇಬ್ಬರೂ ಸ್ಪರ್ಧಿಸುವ ಸಾಧ್ಯತೆಯಿಲ್ಲ.

ಪಕ್ಷವು ಚುನಾವಣೆಗೆ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಕೆಲವು ದಿನಗಳ ನಂತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಿತು.

ಸಭೆಯಲ್ಲಿ ರಾಜಸ್ಥಾನ, ಅಸ್ಸಾಂ ಮತ್ತು ಗುಜರಾತ್‌ನಿಂದ ತಲಾ 14, ಮಧ್ಯಪ್ರದೇಶದಿಂದ 16 ಮತ್ತು ಉತ್ತರಾಖಂಡದಿಂದ ಐದು, ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯುದಿಂದ ಒಂದು ಸ್ಥಾನದ ಕುರಿತು ಚರ್ಚಿಸಲಾಯಿತು. ಸೋಮವಾರ ಕಾಂಗ್ರೆಸ್‌ಗೆ ಸೇರಲು ಬಿಜೆಪಿ ತೊರೆದ ರಾಹುಲ್ ಕಸ್ವಾನ್ ಸೇರಿದಂತೆ ರಾಜಸ್ಥಾನದಿಂದ ಸುಮಾರು 10 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT