ಸಾಂದರ್ಭಿಕ ಚಿತ್ರ 
ದೇಶ

ದೇಶದ ವಿವಿಧೆಡೆ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ

ದೇಶದ ವಿವಿಧ ಭಾಗಗಳಲ್ಲಿ ಚಂದ್ರನ ದರ್ಶನವಾಗಿದ್ದು, ಮುಸ್ಲಿಮರು ಮಂಗಳವಾರದಿಂದ ರಂಜಾನ್ ಉಪವಾಸವನ್ನು ಪ್ರಾರಂಭಿಸುತ್ತಾರೆ ಎಂದು ಜಮಿಯತ್ ಉಲೇಮಾ-ಎ-ಹಿಂದ್ ತಿಳಿಸಿದೆ.

ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಚಂದ್ರನ ದರ್ಶನವಾಗಿದ್ದು, ಮುಸ್ಲಿಮರು ಮಂಗಳವಾರದಿಂದ ರಂಜಾನ್ ಉಪವಾಸವನ್ನು ಪ್ರಾರಂಭಿಸುತ್ತಾರೆ ಎಂದು ಜಮಿಯತ್ ಉಲೇಮಾ-ಎ-ಹಿಂದ್ ತಿಳಿಸಿದೆ.

ಸೋಮವಾರ ರಾಷ್ಟ್ರ ರಾಜಧಾನಿಯ ಬಹದ್ದೂರ್ ಶಾ ಜಾಫರ್ ಮಾರ್ಗದಲ್ಲಿ ಜಮೀಯತ್ ಉಲೇಮಾ-ಎ-ಹಿಂದ್ ಕಾರ್ಯದರ್ಶಿ ಮೌಲಾನಾ ನಿಯಾಜ್ ಅಹ್ಮದ್ ಫಾರೂಕಿ ಅವರ ಅಧ್ಯಕ್ಷತೆಯಲ್ಲಿ ರುಯಾತ್-ಎ-ಹಿಲಾಲ್ ಸಮಿತಿಯ ಸಭೆಯು ನಡೆಯಿತು.

ದೇಶದ ಹಲವು ಭಾಗಗಳಲ್ಲಿ ಚಂದ್ರನ ದರ್ಶನವಾಗಿದೆ ಎಂಬುದು ತಿಳಿದುಬಂದಿದೆ. ಆದ್ದರಿಂದ, ಮೊದಲ ರಂಜಾನ್ ಮಂಗಳವಾರ, ಮಾರ್ಚ್ 12, 2024 ರಂದು ಬರುತ್ತದೆ ಎಂದು ಘೋಷಿಸಲಾಗಿದೆ ಎಂದು ಮುಸ್ಲಿಂ ಸಂಘಟನೆ ತಿಳಿಸಿದೆ.

ಫತೇಪುರಿ ಮಸೀದಿ ಇಮಾಮ್ ಮುಫ್ತಿ ಮುಕರಮ್ ಅಹ್ಮದ್ ಕೂಡ ಚಂದ್ರನ ದರ್ಶನವಾಗಿದ್ದು, ಮಂಗಳವಾರ ಉಪವಾಸ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ ಅವರು, ಮಸೀದಿಯಿಂದ ಮತ್ತು ದೇಶದ ಹಲವು ಭಾಗಗಳಲ್ಲಿ ಅನೇಕ ಜನರಿಗೆ ಚಂದ್ರ ಸ್ಪಷ್ಟವಾಗಿ ಗೋಚರಿಸಿದೆ ಎಂದು ಹೇಳಿದ್ದಾರೆ.

ಪವಿತ್ರ ತಿಂಗಳ ಆರಂಭವನ್ನು ಗುರುತಿಸುವ ಮೂಲಕ ಪ್ರಪಂಚದಾದ್ಯಂತದ ಲಕ್ಷಾಂತರ ಮುಸ್ಲಿಮರು ದರ್ಶನಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ರಂಜಾನ್ ಸಮಯದಲ್ಲಿ, ಮುಸ್ಲೀಮರು ಮುಂಜಾನೆ ಊಟವಾದ 'ಸೆಹ್ರಿ' ನಂತರ ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸ ಮಾಡುತ್ತಾರೆ ಮತ್ತು ಸೂರ್ಯಾಸ್ತದ ಸಮಯದಲ್ಲಿ ಇಫ್ತಾರ್ ನೊಂದಿಗೆ ತಮ್ಮ ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ತಿಂಗಳ ಅಂತ್ಯವನ್ನು ಈದ್ ಉಲ್ ಫಿತ್ರ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಿನಾಮೆ ಕೊಡದ ದೀದಿಗೆ ಶಾಕ್; ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್‌.ಎನ್ ರವಿ!

West Bengal: ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊಲೆಗೆ ಬಳಸಲಾಗಿದ್ದ ಬೈಕ್ ವಶಕ್ಕೆ, ಪೊಲೀಸ್ ತನಿಖೆ ಚುರುಕು

IPL 2026: Mitchell Marsh ಸ್ಫೋಟಕ ಶತಕ, RCB ವಿರುದ್ಧ ಬೃಹತ್ ಮೊತ್ತದತ್ತ LSG! ಪಂದ್ಯಕ್ಕೆ ಮಳೆ ಅಡ್ಡಿ

ಮಹಾರಾಷ್ಟ್ರ ಡಿಸಿಎಂ Eknath Shinde ಇದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಅವಘಡ; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್; Video!

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್-ದೇವಿಶಾ ಶೆಟ್ಟಿ ಜೋಡಿಗೆ ಹೆಣ್ಣು ಮಗು ಜನನ

SCROLL FOR NEXT