ಮಂಡ್ಯ: ಮನೆಗೆ ನುಗ್ಗಿದ ರಸ್ತೆ ಸಾರಿಗೆ ಬಸ್, ವ್ಯಕ್ತಿ ಸಾವು, ನಾಲ್ವರಿಗೆ ಗಾಯ! 
ದೇಶ

ಉತ್ತರ ಪ್ರದೇಶ: ಹೈವೋಲ್ಟೇಜ್ ತಂತಿ ತಗುಲಿ ಬಸ್ ಗೆ ಬೆಂಕಿ, ಐವರು ಸಾವು 11 ಮಂದಿಗೆ ಗಾಯ

ಉತ್ತರ ಪ್ರದೇಶದ ಗಾಜಿಪುರದಲ್ಲಿ ಸೋಮವಾರ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ

ಗಾಜಿಪುರ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಸೋಮವಾರ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 11 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬವೊಂದು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೌವಿನಿಂದ ಮರ್ದಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಹರ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಎಸ್‌ಎಚ್‌ಒ ಧರ್ಮೇಂದ್ರ ಕುಮಾರ್ ಪಾಂಡೆ ಅವರು ಪಿಟಿಐಗೆ ತಿಳಿಸಿದ್ದಾರೆ.

ಬಸ್ ಗೆ ಹೈ-ಟೆನ್ಷನ್ ಎಲೆಕ್ಟ್ರಿಕ್ ಲೈನ್‌ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಎಂದು ಪಾಂಡೆ ಹೇಳಿದ್ದಾರೆ.

ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 50,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಗಾಜಿಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ದುಃಖತಪ್ತ ಕುಟುಂಬಗಳೊಂದಿಗೆ ನಾವು ಇರುತ್ತೇವೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಆದಿತ್ಯನಾಥ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT