ಪಿ ಚಿದಂಬರಂ 
ದೇಶ

BJP-RSS ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವದ ಅಂತ್ಯ: ಪಿ ಚಿದಂಬರಂ

ಬಿಜೆಪಿ-ಆರ್‍ಎಸ್‍ಎಸ್ ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಬಿಜೆಪಿ-ಆರ್‍ಎಸ್‍ಎಸ್ ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು ಸೋಮವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂವಿಧಾನವನ್ನು ತಿದ್ದುಪಡಿ ಮಾಡುವ ಬಿಜೆಪಿಯ ಉದ್ದೇಶವು ಎಂದಿಗೂ ರಹಸ್ಯವಾಗಿರಲಿಲ್ಲ. ಹತ್ತಾರು ಬಿಜೆಪಿ ನಾಯಕರು ಖಾಸಗಿ ಸಂಭಾಷಣೆಗಳಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿರಬೇಕು, ಹಿಂದಿ ಭಾರತದ ಏಕೈಕ ಅಧಿಕೃತ ಭಾಷೆಯಾಗಬೇಕು ಎಂದು ಹೇಳಿದ್ದಾರೆ. ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಂವಿಧಾನವನ್ನು ತಿದ್ದುಪಡಿ ಮಾಡುವ ಕಲ್ಪನೆಯನ್ನು ಪೋಷಿಸುವುದನ್ನು ಮುಂದುವರೆಸಿದೆ ಎಂದು ಹೇಳಿದ್ದಾರೆ.

ಬಿಜೆಪಿ-ಆರ್‍ಎಸ್‍ಎಸ್ ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ, ಫೆಡರಲಿಸಂ, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಇಂಗ್ಲಿಷ್ ಒಂದೇ ಆಗಿರುವುದು ಕೊನೆಗೊಳ್ಳುತ್ತದೆ.

ಆರ್‌ಎಸ್‌ಎಸ್/ಬಿಜೆಪಿ ಅಜೆಂಡಾದ ಪ್ರಕಾರ ಸಂವಿಧಾನವನ್ನು ತಿದ್ದುಪಡಿ ಮಾಡಿದರೆ, ಅದು ಸಂಸದೀಯ ಪ್ರಜಾಪ್ರಭುತ್ವ, ಫೆಡರಲಿಸಂ, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಎರಡು ಅಧಿಕೃತ ಭಾಷೆಗಳಲ್ಲಿ ಇಂಗ್ಲಿಷ್ ಒಂದಾಗುತ್ತದೆ ಎಂದು ತಿಳಿಸಿದ್ದಾರೆ.

ಈ ನಡುವೆ ಅನಂತ್ ಕುಮಾರ್ ಹೆಗಡೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಸ್ಪಷ್ಟನೆ ನೀಡಿದೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಂವಿಧಾನದ ಕುರಿತು ಸಂಸದ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳು ಮತ್ತು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಬಿಜೆಪಿ ಪುನರುಚ್ಚರಿಸುತ್ತದೆ ಮತ್ತು ಅನಂತ್ ಕುಮಾರ್ ಹೆಗ್ಗಡೆಯವರ ಅಭಿಪ್ರಾಯಗಳಿಗೆ ಸಂಬಂಧಿಸಿದಂತೆ ವಿವರಣೆಯನ್ನು ಕೇಳುತ್ತೇವೆ ಎಂದು ಹೇಳಿದೆ.

ಜಿಲ್ಲೆಯ ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗ್ಡೆ, 'ಸಂವಿಧಾನ ತಿದ್ದುಪಡಿ ಅವಶ್ಯಕತೆ ಇದೆ. ಕಾಂಗ್ರೆಸ್​​ನವರು ಸಂವಿಧಾನದಲ್ಲಿ ಬೇಡವಾದದನ್ನೆಲ್ಲ ಸೇರಿಸಿದ್ದಾರೆ. ಅದರ ತಿದ್ದುಪಡಿ ಮಾಡಬೇಕಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಹೇಳಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT